ಮಲ್ಪೆ: ತೆಂಕನಿಡಿಯೂರು ಗ್ರಾ.ಪಂ.ಅಧ್ಯಕ್ಷೆ ಶೋಭಾಗೆ ಜಾತಿ ನಿಂದನೆ ಮಾಡಿದ ಆರೋಪದಲ್ಲಿ 8 ಮಂದಿ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ದಲಿತ ನಿಂದನೆ ಪ್ರಕರಣ ದಾಖಲಾಗಿದೆ.
ಜೂ.28ರಂದು ಪಿಡಿಒ ದಯಾನಂದ ಅವರು ಎಸ್ಎಲ್ಆರ್ಎಂ ಘಟಕದಲ್ಲಿ ನೀರಿನ ಹರಿವಿಗೆ ಅಡಚಣೆಯಾಗಿರುವ ಕಾರಣಕ್ಕೆ ಸ್ಥಳಕ್ಕೆ ಬರುವಂತೆ ಹೇಳಿದ ಹಿನ್ನೆಲೆಯಲ್ಲಿ ಶೋಭಾ ಅವರು ಸಂಜೆ 5 ಗಂಟೆಗೆ ತೆಂಕನಿಡಿಯೂರು ಶ್ಮಶಾನದ ಬಳಿಯ ಎಸ್ಎಲ್ ಆರ್ಎಂ ತ್ಯಾಜ್ಯ ವಿಲೇವಾರಿ ಘಟಕದ ಬಳಿ ಬಂದಿದ್ದರು.
ಆಗ ಆರೋಪಿಗಳಾದ ಶರತ್ ಬೈಲಕೆರೆ, ಕಿರಣ ಪಿಂಟೋ, ವಿಜಯಪ್ರಕಾಶ್, ಗಾಯತ್ರಿ, ಪುಷ್ಪಾ, ಶಾಲಿನಿ, ಕೃಷ್ಣ ಶೆಟ್ಟಿ ಹಾಗೂ ಇತರರು ಸೇರಿ ಏಕವಚನದಲ್ಲಿ ಜಾತಿನಿಂದನೆ ಮಾಡಿ, ಹಲ್ಲೆ ನಡೆಸಲು ಮುಂದಾಗಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದಾರೆ. ತನ್ನನ್ನು ಅವರನ್ನು ಅಧ್ಯಕ್ಷ ಪದವಿಯಿಂದ ಕೆಳಗಿಳಿಸಬೇಕೆಂಬ ಉದ್ದೇಶವಿಟ್ಟುಕೊಂಡು ಈ ಕೃತ್ಯ ನಡೆಸಲಾಗಿದೆ ಎಂದು ಶೋಭಾ ಅವರು ಮಲ್ಪೆ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…