Featured

ಮಲ್ಪೆ: ಗ್ರಾ.ಪಂ.ಅಧ್ಯಕ್ಷೆಗೆ ಜಾತಿನಿಂದನೆ, ಜೀವಬೆದರಿಕೆ ; 8 ಮಂದಿ ವಿರುದ್ಧ ಪ್ರಕರಣ ದಾಖಲು – vishwanews24

ಮಲ್ಪೆ: ಗ್ರಾ.ಪಂ.ಅಧ್ಯಕ್ಷೆಗೆ ಜಾತಿನಿಂದನೆ, ಜೀವಬೆದರಿಕೆ – 8 ಮಂದಿ ವಿರುದ್ಧ ಪ್ರಕರಣ ದಾಖಲು

ಮಲ್ಪೆ: ತೆಂಕನಿಡಿಯೂರು ಗ್ರಾ.ಪಂ.ಅಧ್ಯಕ್ಷೆ ಶೋಭಾಗೆ ಜಾತಿ ನಿಂದನೆ ಮಾಡಿದ ಆರೋಪದಲ್ಲಿ 8 ಮಂದಿ ವಿರುದ್ಧ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ದಲಿತ ನಿಂದನೆ ಪ್ರಕರಣ ದಾಖಲಾಗಿದೆ.

ಜೂ.28ರಂದು ಪಿಡಿಒ ದಯಾನಂದ ಅವರು ಎಸ್‌ಎಲ್‌ಆರ್‌ಎಂ ಘಟಕದಲ್ಲಿ ನೀರಿನ ಹರಿವಿಗೆ ಅಡಚಣೆಯಾಗಿರುವ ಕಾರಣಕ್ಕೆ ಸ್ಥಳಕ್ಕೆ ಬರುವಂತೆ ಹೇಳಿದ ಹಿನ್ನೆಲೆಯಲ್ಲಿ ಶೋಭಾ ಅವರು ಸಂಜೆ 5 ಗಂಟೆಗೆ ತೆಂಕನಿಡಿಯೂರು ಶ್ಮಶಾನದ ಬಳಿಯ ಎಸ್‌ಎಲ್‌ ಆರ್‌ಎಂ ತ್ಯಾಜ್ಯ ವಿಲೇವಾರಿ ಘಟಕದ ಬಳಿ ಬಂದಿದ್ದರು.

ಆಗ ಆರೋಪಿಗಳಾದ ಶರತ್‌ ಬೈಲಕೆರೆ, ಕಿರಣ ಪಿಂಟೋ, ವಿಜಯಪ್ರಕಾಶ್‌, ಗಾಯತ್ರಿ, ಪುಷ್ಪಾ, ಶಾಲಿನಿ, ಕೃಷ್ಣ ಶೆಟ್ಟಿ ಹಾಗೂ ಇತರರು ಸೇರಿ ಏಕವಚನದಲ್ಲಿ ಜಾತಿನಿಂದನೆ ಮಾಡಿ, ಹಲ್ಲೆ ನಡೆಸಲು ಮುಂದಾಗಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದಾರೆ. ತನ್ನನ್ನು ಅವರನ್ನು ಅಧ್ಯಕ್ಷ ಪದವಿಯಿಂದ ಕೆಳಗಿಳಿಸಬೇಕೆಂಬ ಉದ್ದೇಶವಿಟ್ಟುಕೊಂಡು ಈ ಕೃತ್ಯ ನಡೆಸಲಾಗಿದೆ ಎಂದು ಶೋಭಾ ಅವರು ಮಲ್ಪೆ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

8 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

9 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

9 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

9 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

9 hours ago