Featured

ಮಲ್ಪೆ: ಗ್ರಾ.ಪಂ.ಅಧ್ಯಕ್ಷೆಗೆ ಜಾತಿನಿಂದನೆ, ಜೀವಬೆದರಿಕೆ ; 8 ಮಂದಿ ವಿರುದ್ಧ ಪ್ರಕರಣ ದಾಖಲು – vishwanews24

ಮಲ್ಪೆ: ಗ್ರಾ.ಪಂ.ಅಧ್ಯಕ್ಷೆಗೆ ಜಾತಿನಿಂದನೆ, ಜೀವಬೆದರಿಕೆ – 8 ಮಂದಿ ವಿರುದ್ಧ ಪ್ರಕರಣ ದಾಖಲು

ಮಲ್ಪೆ: ತೆಂಕನಿಡಿಯೂರು ಗ್ರಾ.ಪಂ.ಅಧ್ಯಕ್ಷೆ ಶೋಭಾಗೆ ಜಾತಿ ನಿಂದನೆ ಮಾಡಿದ ಆರೋಪದಲ್ಲಿ 8 ಮಂದಿ ವಿರುದ್ಧ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ದಲಿತ ನಿಂದನೆ ಪ್ರಕರಣ ದಾಖಲಾಗಿದೆ.

ಜೂ.28ರಂದು ಪಿಡಿಒ ದಯಾನಂದ ಅವರು ಎಸ್‌ಎಲ್‌ಆರ್‌ಎಂ ಘಟಕದಲ್ಲಿ ನೀರಿನ ಹರಿವಿಗೆ ಅಡಚಣೆಯಾಗಿರುವ ಕಾರಣಕ್ಕೆ ಸ್ಥಳಕ್ಕೆ ಬರುವಂತೆ ಹೇಳಿದ ಹಿನ್ನೆಲೆಯಲ್ಲಿ ಶೋಭಾ ಅವರು ಸಂಜೆ 5 ಗಂಟೆಗೆ ತೆಂಕನಿಡಿಯೂರು ಶ್ಮಶಾನದ ಬಳಿಯ ಎಸ್‌ಎಲ್‌ ಆರ್‌ಎಂ ತ್ಯಾಜ್ಯ ವಿಲೇವಾರಿ ಘಟಕದ ಬಳಿ ಬಂದಿದ್ದರು.

ಆಗ ಆರೋಪಿಗಳಾದ ಶರತ್‌ ಬೈಲಕೆರೆ, ಕಿರಣ ಪಿಂಟೋ, ವಿಜಯಪ್ರಕಾಶ್‌, ಗಾಯತ್ರಿ, ಪುಷ್ಪಾ, ಶಾಲಿನಿ, ಕೃಷ್ಣ ಶೆಟ್ಟಿ ಹಾಗೂ ಇತರರು ಸೇರಿ ಏಕವಚನದಲ್ಲಿ ಜಾತಿನಿಂದನೆ ಮಾಡಿ, ಹಲ್ಲೆ ನಡೆಸಲು ಮುಂದಾಗಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದಾರೆ. ತನ್ನನ್ನು ಅವರನ್ನು ಅಧ್ಯಕ್ಷ ಪದವಿಯಿಂದ ಕೆಳಗಿಳಿಸಬೇಕೆಂಬ ಉದ್ದೇಶವಿಟ್ಟುಕೊಂಡು ಈ ಕೃತ್ಯ ನಡೆಸಲಾಗಿದೆ ಎಂದು ಶೋಭಾ ಅವರು ಮಲ್ಪೆ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

2 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

2 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

2 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

5 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

5 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

6 hours ago