ಉಡುಪಿ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿಸಲಾಗಿರುವ ಕೋಟಿ ಕಂಠ ಗಾಯನ ಎಂಬ ಮಹಾಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಯೂ ತನ್ನ ಕಾಣಿಕೆಯನ್ನು ನೀಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಮಂಗಳೂರು ಮತ್ತು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ವತಿಯಿಂದ, ಉಡುಪಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಲ್ಪೆ ಮೀನುಗಾರರ ಸಂಘದ ಸಹಕಾರದೊಂದಿಗೆ ಅರಬ್ಬಿ ಸಮುದ್ರದ ಮಧ್ಯದಲ್ಲಿ ಆಯೋಜಿಸಿದ್ದ ಕೋಟಿ ಕಂಠ ಗಾಯನಕ್ಕೆ ಶುಕ್ರವಾರ ಅದ್ಧೂರಿಯಾಗಿ ಚಾಲನೆ ದೊರಕಿತು.
ಮಲ್ಪೆ ಸೀ ವಾಕ್ ಬಳಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ಕನ್ನಡ ಬಾವುಟವನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಕೋಟಿ ಕಂಠ ಗಾಯನದ ಅಂಗವಾಗಿ ಬೋಟ್ಗಳನ್ನು ಶೃಂಗಾರಗೊಳಿಸಲಾಗಿತ್ತು. 100 ಕ್ಕೂ ಅಧಿಕ ಪರ್ಸಿಯನ್ ಬೋಟ್ಗಳು ಸೀ ವಾಕ್ನಿಂದ ಹೊರಟು ಸಮುದ್ರ ಮಧ್ಯೆ ಸಾಗಿಬಂದವು. ಪ್ರತಿಯೊಬ್ಬರು ಕನ್ನಡ ಬಾವುಟವನ್ನು ಬೀಸುತ್ತಿದ್ದು, ಸಮುದ್ರ ಮಧ್ಯೆ ಕನ್ನಡದ ಕಂಪು ಮೊಳಗಿತು.
ಕನ್ನಡ ಬಾವುಟ ಹಸ್ತಾಂತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಎಂ. ಕೂರ್ಮರಾವ್.
ಯಶ್ಪಾಲ್ ಎ. ಸುವರ್ಣ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಸಾಧು ಸಾಲಿಯಾನ್, ಸುಭಾಸ್, ಪರ್ಸಿಯನ್ ಸಂಘದ ನಾಗರಾಜ ಸುವರ್ಣ, ನಟಿ ಮಾನಸಿ ಸುಧೀರ್, ಗಣೇಶ್ ಉಪಸ್ಥಿತರಿದ್ದರು.
ಕನ್ನಡ ನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಕೋಟಿಗೂ ಹೆಚ್ಚು ಮಂದಿ ಕನ್ನಡ ಕುರಿತ ಗೀತೆಗಳನ್ನು ಹಾಡುವ ಕೋಟಿ ಕಂಠ ಗಾಯನಕ್ಕೆ ಉಡುಪಿಯಿಂದ 5 ಲಕ್ಷ ಮಂದಿ ಭಾಗವಹಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಈ ಹಿಂದೆಯೇ ತಿಳಿಸಿದ್ದರು. 5 ಲಕ್ಷ ಜನರು ಸೇರುವಷ್ಟು ಸಿದ್ಧತೆ ಮಾಡಿಕೊಳ್ಳಬೇಕು. ಒಂದು ಪ್ರದೇಶದಲ್ಲಿ ಕನಿಷ್ಟ 100 ಮಂದಿ ಹಾಡಬೇಕು. ಜಿಲ್ಲೆಯ ಸಹಕಾರಿ ಸಂಘಗಳು ಮತ್ತು ಸಿಬ್ಬಂದಿ, ಕಾರ್ಖಾನೆ ಕಾರ್ಮಿಕರು, ಎಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ, ನಗರ ಸಂಸ್ಥೆಗಳಲ್ಲಿ ಸಿಬ್ಬಂದಿ ಭಾಗವಹಿಸಬೇಕು ಎಂದು ಸಚಿವರು ತಿಳಿಸಿದ್ದರು
ಜಮೀನು ನಕ್ಷೆಗಳು ಇನ್ಮುಂದೆ ಆನ್ ಲೈನ್ ನಲ್ಲೇ ಲಭ್ಯ.. ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…