Featured

ಮಲ್ಪೆ : ಚಲಿಸುತ್ತಿರುವ ಬೋಟ್ ಗಳಲ್ಲಿ ಸಾವಿರಾರು ಗಾಯಕರಿಂದ ಕೋಟಿ ಕಂಠ ಗಾಯನ – Vishwanews24

ಮಲ್ಪೆ : ಸಾವಿರಾರು ಗಾಯಕರಿಂದ ಚಲಿಸುತ್ತಿರುವ ಬೋಟ್ ಗಳಲ್ಲಿ ಕೋಟಿ ಕಂಠ ಗಾಯನ

ಉಡುಪಿ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿಸಲಾಗಿರುವ ಕೋಟಿ ಕಂಠ ಗಾಯನ ಎಂಬ ಮಹಾಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಯೂ ತನ್ನ ಕಾಣಿಕೆಯನ್ನು ನೀಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಮಂಗಳೂರು ಮತ್ತು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ವತಿಯಿಂದ, ಉಡುಪಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಲ್ಪೆ ಮೀನುಗಾರರ ಸಂಘದ ಸಹಕಾರದೊಂದಿಗೆ ಅರಬ್ಬಿ ಸಮುದ್ರದ ಮಧ್ಯದಲ್ಲಿ ಆಯೋಜಿಸಿದ್ದ ಕೋಟಿ ಕಂಠ ಗಾಯನಕ್ಕೆ ಶುಕ್ರವಾರ ಅದ್ಧೂರಿಯಾಗಿ ಚಾಲನೆ ದೊರಕಿತು.

ಮಲ್ಪೆ ಸೀ ವಾಕ್ ಬಳಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ಕನ್ನಡ ಬಾವುಟವನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಕೋಟಿ ಕಂಠ ಗಾಯನದ ಅಂಗವಾಗಿ ಬೋಟ್‌ಗಳನ್ನು ಶೃಂಗಾರಗೊಳಿಸಲಾಗಿತ್ತು. 100 ಕ್ಕೂ ಅಧಿಕ ಪರ್ಸಿಯನ್ ಬೋಟ್‌ಗಳು ಸೀ ವಾಕ್‌ನಿಂದ ಹೊರಟು ಸಮುದ್ರ ಮಧ್ಯೆ ಸಾಗಿಬಂದವು. ಪ್ರತಿಯೊಬ್ಬರು ಕನ್ನಡ ಬಾವುಟವನ್ನು ಬೀಸುತ್ತಿದ್ದು, ಸಮುದ್ರ ಮಧ್ಯೆ ಕನ್ನಡದ ಕಂಪು ಮೊಳಗಿತು.

ಕನ್ನಡ ಬಾವುಟ ಹಸ್ತಾಂತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಎಂ. ಕೂರ್ಮರಾವ್.

ಯಶ್‌ಪಾಲ್ ಎ. ಸುವರ್ಣ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಸಾಧು ಸಾಲಿಯಾನ್, ಸುಭಾಸ್, ಪರ್ಸಿಯನ್ ಸಂಘದ ನಾಗರಾಜ ಸುವರ್ಣ, ನಟಿ ಮಾನಸಿ ಸುಧೀರ್, ಗಣೇಶ್ ಉಪಸ್ಥಿತರಿದ್ದರು.

ಕನ್ನಡ ನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಕೋಟಿಗೂ ಹೆಚ್ಚು ಮಂದಿ ಕನ್ನಡ ಕುರಿತ ಗೀತೆಗಳನ್ನು ಹಾಡುವ ಕೋಟಿ ಕಂಠ ಗಾಯನಕ್ಕೆ ಉಡುಪಿಯಿಂದ 5 ಲಕ್ಷ ಮಂದಿ ಭಾಗವಹಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಈ ಹಿಂದೆಯೇ ತಿಳಿಸಿದ್ದರು. 5 ಲಕ್ಷ ಜನರು ಸೇರುವಷ್ಟು ಸಿದ್ಧತೆ ಮಾಡಿಕೊಳ್ಳಬೇಕು. ಒಂದು ಪ್ರದೇಶದಲ್ಲಿ ಕನಿಷ್ಟ 100 ಮಂದಿ ಹಾಡಬೇಕು. ಜಿಲ್ಲೆಯ ಸಹಕಾರಿ ಸಂಘಗಳು ಮತ್ತು ಸಿಬ್ಬಂದಿ, ಕಾರ್ಖಾನೆ ಕಾರ್ಮಿಕರು, ಎಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ, ನಗರ ಸಂಸ್ಥೆಗಳಲ್ಲಿ ಸಿಬ್ಬಂದಿ ಭಾಗವಹಿಸಬೇಕು ಎಂದು ಸಚಿವರು ತಿಳಿಸಿದ್ದರು

ಜಮೀನು ನಕ್ಷೆಗಳು ಇನ್ಮುಂದೆ ಆನ್ ಲೈನ್ ನಲ್ಲೇ ಲಭ್ಯ.. ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ – Vishwanews24

Vishwa News 24

Recent Posts

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

6 minutes ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

25 minutes ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 hours ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

3 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

3 hours ago