Featured

ಮಲ್ಪೆ: ತನ್ನ ಸಾವಿಗೆ ನಾನೇ ಕಾರಣ ಎಂದು ಸೂಸೈಡ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – Vishwanews24

ಮಲ್ಪೆ: ತನ್ನ ಸಾವಿಗೆ ನಾನೇ ಕಾರಣ ಎಂದು ಸೂಸೈಡ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ತಾಲೂಕಿನ ನೇಜಾರು ನಿಡಂಬಳ್ಳಿ ಎಂಬಲ್ಲಿಂದ ಅ.18ರಂದು ರಾತ್ರಿ ನಾಪತ್ತೆಯಾಗಿದ್ದ 44ವರ್ಷದ ಪ್ರವೀಣ್ ಬೆಳ್ಚಾಡ ಎಂಬವರ ಮೃತದೇಹ ಹತ್ತು ದಿನ ಬಳಿಕ ಬ್ರಹ್ಮಾವರ ತಾಲೂಕಿನ ಹಂದಾಡಿ ಕಂಬಳ ಗದ್ದೆಯ ಹೊಳೆ ಬದಿಯಲ್ಲಿ ಇಂದು ಪತ್ತೆಯಾಗಿದೆ.

ಇವರು ನೇಜಾರಿನ ಬಂಗ್ಲೆ ಮನೆ ಬಳಿಯಲ್ಲಿ ಸ್ವಂತ ಮನೆಯಲ್ಲಿ ವಾಸ ಮಾಡಿಕೊಂಡಿದ್ದು, 6 ವರ್ಷಗಳ ಹಿಂದೆ ಮದುವೆಯಾಗಿದ್ದರು. ಆದರೆ ಪತ್ನಿಯಿಂದ ವಿಚ್ಛೇದನ ಪಡೆದು ಒಬ್ಬಂಟಿಯಾಗಿ ವಾಸವಾಗಿದ್ದರು‌. ಇವರು ಪ್ರತಿ ದಿನ ಊಟ, ಉಪಹಾರಕ್ಕೆ ಮನೆ ಸಮೀಪದ ದೊಡ್ಡಮ್ಮನ ಮನೆಗೆ ಹೋಗುತ್ತಿದ್ದರು. ಅ. 18ರಂದು ರಾತ್ರಿ ದೊಡ್ಡಮ್ಮನ ಮಗಳು ಜಯಂತಿ ಎಂಬವರು ಪ್ರವೀಣ್ ಅವರಿಗೆ ಕರೆ ಮಾಡಿ ಊಟಕ್ಕೆ ಬರುವಂತೆ ಹೇಳಿದ್ದರು. 10-15 ನಿಮಿಷದಲ್ಲಿ ಬರುತ್ತೇನೆ ಇಲ್ಲದಿದ್ದರೆ, ಬೆಳಿಗ್ಗೆ ತಿಂಡಿ ತಿನ್ನಲು ಬರುತ್ತೇನೆ ಎಂದು ತಿಳಿಸಿದ್ದರು. ಅಂದು ಊಟಕ್ಕೆ ಬಂದಿರಲಿಲ್ಲ. ಅ. 19ರಂದು ಬೆಳಿಗ್ಗೆ 8ಗಂಟೆಗೆ ಜಯಂತಿ ಅವರು ಕರೆ ಮಾಡಿದಾಗ ಪ್ರವೀಣ್ ಅವರ ಮೊಬೈಲ್ ಸ್ವೀಚ್ ಆಫ್ ಆಗಿತ್ತು.

ಮಂಗಳೂರು: FLIPKART ನಿಂದ ಲ್ಯಾಪ್‌ಟಾಪ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಬಂದದ್ದು ದೊಡ್ಡ ಕಲ್ಲು – Vishwanews24

ಎರಡು ದಿನಗಳ ಬಳಿಕ ಬ್ರಹ್ಮಾವರ ಸೇತುವೆಯ ಪ್ರವೀಣ್ ಸ್ಕೂಟರ್ ಪತ್ತೆಯಾಗಿತ್ತು. ಆ ಬಳಿಕ ಪ್ರವೀಣ್ ಗಾಗಿ ಅಗ್ನಿಶಾಮಕ ದಳ, ಪೊಲೀಸರ ಸಹಕಾರದೊಂದಿಗೆ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ ನದಿಯಲ್ಲಿ ಶೋಧ ಕಾರ್ಯ ಆರಂಭಿಸಿತ್ತು. ಆದರೆ ಪ್ರವೀಣ್ ಮೃತದೇಹ ಪತ್ತೆಯಾಗಿರಲಿಲ್ಲ. ಇಂದು ಹಂದಾಡಿ ಕಂಬಳ ಗದ್ದೆಯ ಹೊಳೆ ಬದಿಯಲ್ಲಿ ಪ್ರವೀಣ್ ಮೃತದೇಹ ಪತ್ತೆಯಾಗಿದೆ. ಪ್ರವೀಣ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago