Featured

ಮಲ್ಪೆ: ತನ್ನ ಸಾವಿಗೆ ನಾನೇ ಕಾರಣ ಎಂದು ಸೂಸೈಡ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – Vishwanews24

ಮಲ್ಪೆ: ತನ್ನ ಸಾವಿಗೆ ನಾನೇ ಕಾರಣ ಎಂದು ಸೂಸೈಡ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ತಾಲೂಕಿನ ನೇಜಾರು ನಿಡಂಬಳ್ಳಿ ಎಂಬಲ್ಲಿಂದ ಅ.18ರಂದು ರಾತ್ರಿ ನಾಪತ್ತೆಯಾಗಿದ್ದ 44ವರ್ಷದ ಪ್ರವೀಣ್ ಬೆಳ್ಚಾಡ ಎಂಬವರ ಮೃತದೇಹ ಹತ್ತು ದಿನ ಬಳಿಕ ಬ್ರಹ್ಮಾವರ ತಾಲೂಕಿನ ಹಂದಾಡಿ ಕಂಬಳ ಗದ್ದೆಯ ಹೊಳೆ ಬದಿಯಲ್ಲಿ ಇಂದು ಪತ್ತೆಯಾಗಿದೆ.

ಇವರು ನೇಜಾರಿನ ಬಂಗ್ಲೆ ಮನೆ ಬಳಿಯಲ್ಲಿ ಸ್ವಂತ ಮನೆಯಲ್ಲಿ ವಾಸ ಮಾಡಿಕೊಂಡಿದ್ದು, 6 ವರ್ಷಗಳ ಹಿಂದೆ ಮದುವೆಯಾಗಿದ್ದರು. ಆದರೆ ಪತ್ನಿಯಿಂದ ವಿಚ್ಛೇದನ ಪಡೆದು ಒಬ್ಬಂಟಿಯಾಗಿ ವಾಸವಾಗಿದ್ದರು‌. ಇವರು ಪ್ರತಿ ದಿನ ಊಟ, ಉಪಹಾರಕ್ಕೆ ಮನೆ ಸಮೀಪದ ದೊಡ್ಡಮ್ಮನ ಮನೆಗೆ ಹೋಗುತ್ತಿದ್ದರು. ಅ. 18ರಂದು ರಾತ್ರಿ ದೊಡ್ಡಮ್ಮನ ಮಗಳು ಜಯಂತಿ ಎಂಬವರು ಪ್ರವೀಣ್ ಅವರಿಗೆ ಕರೆ ಮಾಡಿ ಊಟಕ್ಕೆ ಬರುವಂತೆ ಹೇಳಿದ್ದರು. 10-15 ನಿಮಿಷದಲ್ಲಿ ಬರುತ್ತೇನೆ ಇಲ್ಲದಿದ್ದರೆ, ಬೆಳಿಗ್ಗೆ ತಿಂಡಿ ತಿನ್ನಲು ಬರುತ್ತೇನೆ ಎಂದು ತಿಳಿಸಿದ್ದರು. ಅಂದು ಊಟಕ್ಕೆ ಬಂದಿರಲಿಲ್ಲ. ಅ. 19ರಂದು ಬೆಳಿಗ್ಗೆ 8ಗಂಟೆಗೆ ಜಯಂತಿ ಅವರು ಕರೆ ಮಾಡಿದಾಗ ಪ್ರವೀಣ್ ಅವರ ಮೊಬೈಲ್ ಸ್ವೀಚ್ ಆಫ್ ಆಗಿತ್ತು.

ಮಂಗಳೂರು: FLIPKART ನಿಂದ ಲ್ಯಾಪ್‌ಟಾಪ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಬಂದದ್ದು ದೊಡ್ಡ ಕಲ್ಲು – Vishwanews24

ಎರಡು ದಿನಗಳ ಬಳಿಕ ಬ್ರಹ್ಮಾವರ ಸೇತುವೆಯ ಪ್ರವೀಣ್ ಸ್ಕೂಟರ್ ಪತ್ತೆಯಾಗಿತ್ತು. ಆ ಬಳಿಕ ಪ್ರವೀಣ್ ಗಾಗಿ ಅಗ್ನಿಶಾಮಕ ದಳ, ಪೊಲೀಸರ ಸಹಕಾರದೊಂದಿಗೆ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ ನದಿಯಲ್ಲಿ ಶೋಧ ಕಾರ್ಯ ಆರಂಭಿಸಿತ್ತು. ಆದರೆ ಪ್ರವೀಣ್ ಮೃತದೇಹ ಪತ್ತೆಯಾಗಿರಲಿಲ್ಲ. ಇಂದು ಹಂದಾಡಿ ಕಂಬಳ ಗದ್ದೆಯ ಹೊಳೆ ಬದಿಯಲ್ಲಿ ಪ್ರವೀಣ್ ಮೃತದೇಹ ಪತ್ತೆಯಾಗಿದೆ. ಪ್ರವೀಣ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago