Featured

ಮಲ್ಪೆ : ತಪ್ಪಿದ ಕೊನೆಯ ಬೋಟ್‌ : ಸೈಂಟ್ ಮೇರಿಸ್‌ ದ್ವೀಪದಲ್ಲೇ ರಾತ್ರಿ ಕಳೆದ ಕೇರಳದ ಪ್ರವಾಸಿಗರು -Vishwanews24

ಉಡುಪಿ: ಪ್ರವಾಸಿಗರನ್ನು ಕರೆದೊಯ್ಯುವ ಕೊನೆಯ ಬೋಟ್‌ ತಪ್ಪಿದ ಕಾರಣ ವಿಹಾರಕ್ಕೆ ಬಂದಿದ್ದ ಕೇರಳ ಮೂಲದ ಮಹಿಳೆ ಸಹಿತ ನಾಲ್ಕು ಮಂದಿ ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪದಲ್ಲೇ ರಾತ್ರಿ ಕಳೆದ ಘಟನೆ ನಡೆದಿದೆ.

ಕೇರಳದ ಕೊಚ್ಚಿನ್‌ ನಿವಾಸಿ ಗಳಾದ ಜಸ್ಟಿನ್‌ (34), ಶೀಜಾ (33), ಜೋಶ್‌ (28) ಮತ್ತು ಹರೀಶ್‌ (17) ದ್ವೀಪದಲ್ಲಿ ಕಳೆಯುವಂತಾಗಿದ್ದವರು. ಸದ್ಯ ಮಲ್ಪೆ ಠಾಣೆಯ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದು, ಸುರಕ್ಷಿತವಾಗಿ ಕೇರಳಕ್ಕೆ ಕಳುಹಿಸಿದ್ದಾರೆ.

ಜಸ್ಟಿನ್‌ ಮತ್ತು ಶೀಜಾ ಕೇರಳದಲ್ಲಿ ಹೋಮ್‌ಸ್ಟೇ ನಡೆಸುತ್ತಿದ್ದು, ಜೋಶ್‌ ಇವರೊಂದಿಗೆ ಕೆಲಸಕ್ಕಿರುವಾತ ಎನ್ನಲಾಗಿದೆ. ಹರೀಶ್‌ 17 ವರ್ಷದೊಳಗಿನ ಕೊಚ್ಚಿನ್‌ ಫುಟ್ಬಾಲ್‌ ಅಕಾಡೆಮಿಯ ಗೋಲ್‌ಕೀಪರ್‌ ಆಗಿದ್ದ ಎಂದು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಈ ನಾಲ್ವರು ನ. 21ರಂದು ಕೇರಳದಿಂದ ರೈಲಿನಲ್ಲಿ ಹೊರಟು ಉಡುಪಿಗೆ ಬಂದಿದ್ದರು. ಉಡುಪಿಯ ವಿವಿಧ ಸ್ಥಳಗಳನ್ನು ಸಂದರ್ಶಿಸಿದ ಬಳಿಕ ನ. 22ರಂದು ಗೋವಾಕ್ಕೆ ತೆರಳಿ ಮತ್ತೆ ಉಡುಪಿಗೆ ಬಂದು ಸೈಂಟ್‌ ಮೇರಿಸ್‌ ದ್ವೀಪ ತಲುಪಿದ್ದರು ಎನ್ನಲಾಗಿದೆ.

ಸೈಂಟ್‌ ಮೇರಿಸ್‌ ದ್ವೀಪದಲ್ಲಿ ವಿಹರಿಸುತ್ತ ಈ ನಾಲ್ವರು ದೊಡ್ಡ ಬಂಡೆಯೊಂದನ್ನು ಏರಿದ್ದರು. ಸಂಜೆ ಬಂಡೆಯ ಸುತ್ತ ನೀರಿನ ಮಟ್ಟ ಏರಿದ್ದರಿಂದ ಇಳಿದು ಬರಲು ಅವರಿಗೆ ಸಾಧ್ಯವಾಗಲಿಲ್ಲ. ನೀರಿನ ಮಟ್ಟ ಸ್ವಲ್ಪ ಇಳಿಯುತ್ತಿದ್ದಂತೆ ಬೋಟ್‌ ಹೊರಡುವ ಸ್ಥಳಕ್ಕೆ ಈ ನಾಲ್ವರು ಬಂದಾಗ ಕೊನೆಯ ಬೋಟ್‌ ದ್ವೀಪದಿಂದ ಮಲ್ಪೆಗೆ ವಾಪಸಾಗಿತ್ತು.

ಭಾನುವಾರ ಬೆಳಿಗ್ಗೆ ಸೈಂಟ್ ಮೇರಿಸ್ ದ್ವೀಪಕ್ಕೆ ಹೋಗಿದ್ದ ಬೋಟ್‌ನವರು ಈ ನಾಲ್ವರನ್ನು ಗಮನಿಸಿದ್ದು ವಿಚಾರಸಿ ದ್ವೀಪಕ್ಕೆ ಕರೆದುಕೊಂಡು ಬಂದಿದ್ದು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಾತ್ರಿಯಲ್ಲಿ ದ್ವೀಪದಲ್ಲಿ ನಿಲ್ಲಲು ಅವಕಾಶ ಇಲ್ಲದ ಕಾರಣ ಪೊಲೀಸರು ಈ ನಾಲ್ವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದು ಗುರುತಿನ ಚೀಟಿ, ರೈಲ್ವೇ ಟಿಕೆಟ್, ಬೋಟ್ ಟಿಕೆಟ್ ಪರಿಶೀಲನೆ ಮಾಡಿ ಸದ್ಯ ನಾಲ್ವರನ್ನು ಕೇರಳಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಮಾತಾನಾಡಿರುವ ಉಡುಪಿ ಎಸ್ಪಿ ನಿಶಾ ಜೇಮ್ಸ್ ” ಬೋಟ್ ತಪ್ಪಿ ನಾಲ್ವರು ದ್ವೀಪದಲ್ಲೆ ಉಳಿದ ವಿಷಯ ವಿಚಾರಣೆಯ ವೇಳೆ ತಿಳಿದು ಬಂದಿದೆ.ಈ ಪ್ರಕರಣಕ್ಕೆ ಸಂಬಂಧಿಸಿ ಕೇರಳ ರಾಜ್ಯ ಪೊಲೀಸರಿಂದ ಮಾಹಿತಿ ಕಲೆ ಹಾಕಲಾಗಿದೆ. ಕೇರಳ ಪೊಲೀಸರು ನೀಡಿರುವ ಹೇಳಿಕೆ ಹೊಂದಾಣಿಕೆ ಆದ ಕಾರಣದಿಂದ ಆ ನಾಲ್ವರನ್ನು ಕೇರಳಕ್ಕೆ ಕಳುಹಿಸಲಾಗಿದೆ. ಈ ವಿಚಾರದಲ್ಲಿ ಮೇಲ್ನೋಟಕ್ಕೆ ಟೆಂಡರ್ ವಹಿಸಿಕೊಂಡಿರುವ ಪ್ರವಾಸಿ ಬೋಟ್ ನ ನಿರ್ಲಕ್ಷ ಸಾಬೀತಾಗಿದ್ದು ಈ ಕುರಿತು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಗೆ ವಿಚಾರಣೆ ನಡೆಸಲು ಕೇಳುತ್ತೇವೆ ಎಂದು ಹೇಳಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

15 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

15 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

15 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

18 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

19 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

19 hours ago