Featured

ಮಲ್ಪೆ : ತಪ್ಪಿದ ಕೊನೆಯ ಬೋಟ್‌ : ಸೈಂಟ್ ಮೇರಿಸ್‌ ದ್ವೀಪದಲ್ಲೇ ರಾತ್ರಿ ಕಳೆದ ಕೇರಳದ ಪ್ರವಾಸಿಗರು -Vishwanews24

ಉಡುಪಿ: ಪ್ರವಾಸಿಗರನ್ನು ಕರೆದೊಯ್ಯುವ ಕೊನೆಯ ಬೋಟ್‌ ತಪ್ಪಿದ ಕಾರಣ ವಿಹಾರಕ್ಕೆ ಬಂದಿದ್ದ ಕೇರಳ ಮೂಲದ ಮಹಿಳೆ ಸಹಿತ ನಾಲ್ಕು ಮಂದಿ ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪದಲ್ಲೇ ರಾತ್ರಿ ಕಳೆದ ಘಟನೆ ನಡೆದಿದೆ.

ಕೇರಳದ ಕೊಚ್ಚಿನ್‌ ನಿವಾಸಿ ಗಳಾದ ಜಸ್ಟಿನ್‌ (34), ಶೀಜಾ (33), ಜೋಶ್‌ (28) ಮತ್ತು ಹರೀಶ್‌ (17) ದ್ವೀಪದಲ್ಲಿ ಕಳೆಯುವಂತಾಗಿದ್ದವರು. ಸದ್ಯ ಮಲ್ಪೆ ಠಾಣೆಯ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದು, ಸುರಕ್ಷಿತವಾಗಿ ಕೇರಳಕ್ಕೆ ಕಳುಹಿಸಿದ್ದಾರೆ.

ಜಸ್ಟಿನ್‌ ಮತ್ತು ಶೀಜಾ ಕೇರಳದಲ್ಲಿ ಹೋಮ್‌ಸ್ಟೇ ನಡೆಸುತ್ತಿದ್ದು, ಜೋಶ್‌ ಇವರೊಂದಿಗೆ ಕೆಲಸಕ್ಕಿರುವಾತ ಎನ್ನಲಾಗಿದೆ. ಹರೀಶ್‌ 17 ವರ್ಷದೊಳಗಿನ ಕೊಚ್ಚಿನ್‌ ಫುಟ್ಬಾಲ್‌ ಅಕಾಡೆಮಿಯ ಗೋಲ್‌ಕೀಪರ್‌ ಆಗಿದ್ದ ಎಂದು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಈ ನಾಲ್ವರು ನ. 21ರಂದು ಕೇರಳದಿಂದ ರೈಲಿನಲ್ಲಿ ಹೊರಟು ಉಡುಪಿಗೆ ಬಂದಿದ್ದರು. ಉಡುಪಿಯ ವಿವಿಧ ಸ್ಥಳಗಳನ್ನು ಸಂದರ್ಶಿಸಿದ ಬಳಿಕ ನ. 22ರಂದು ಗೋವಾಕ್ಕೆ ತೆರಳಿ ಮತ್ತೆ ಉಡುಪಿಗೆ ಬಂದು ಸೈಂಟ್‌ ಮೇರಿಸ್‌ ದ್ವೀಪ ತಲುಪಿದ್ದರು ಎನ್ನಲಾಗಿದೆ.

ಸೈಂಟ್‌ ಮೇರಿಸ್‌ ದ್ವೀಪದಲ್ಲಿ ವಿಹರಿಸುತ್ತ ಈ ನಾಲ್ವರು ದೊಡ್ಡ ಬಂಡೆಯೊಂದನ್ನು ಏರಿದ್ದರು. ಸಂಜೆ ಬಂಡೆಯ ಸುತ್ತ ನೀರಿನ ಮಟ್ಟ ಏರಿದ್ದರಿಂದ ಇಳಿದು ಬರಲು ಅವರಿಗೆ ಸಾಧ್ಯವಾಗಲಿಲ್ಲ. ನೀರಿನ ಮಟ್ಟ ಸ್ವಲ್ಪ ಇಳಿಯುತ್ತಿದ್ದಂತೆ ಬೋಟ್‌ ಹೊರಡುವ ಸ್ಥಳಕ್ಕೆ ಈ ನಾಲ್ವರು ಬಂದಾಗ ಕೊನೆಯ ಬೋಟ್‌ ದ್ವೀಪದಿಂದ ಮಲ್ಪೆಗೆ ವಾಪಸಾಗಿತ್ತು.

ಭಾನುವಾರ ಬೆಳಿಗ್ಗೆ ಸೈಂಟ್ ಮೇರಿಸ್ ದ್ವೀಪಕ್ಕೆ ಹೋಗಿದ್ದ ಬೋಟ್‌ನವರು ಈ ನಾಲ್ವರನ್ನು ಗಮನಿಸಿದ್ದು ವಿಚಾರಸಿ ದ್ವೀಪಕ್ಕೆ ಕರೆದುಕೊಂಡು ಬಂದಿದ್ದು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಾತ್ರಿಯಲ್ಲಿ ದ್ವೀಪದಲ್ಲಿ ನಿಲ್ಲಲು ಅವಕಾಶ ಇಲ್ಲದ ಕಾರಣ ಪೊಲೀಸರು ಈ ನಾಲ್ವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದು ಗುರುತಿನ ಚೀಟಿ, ರೈಲ್ವೇ ಟಿಕೆಟ್, ಬೋಟ್ ಟಿಕೆಟ್ ಪರಿಶೀಲನೆ ಮಾಡಿ ಸದ್ಯ ನಾಲ್ವರನ್ನು ಕೇರಳಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಮಾತಾನಾಡಿರುವ ಉಡುಪಿ ಎಸ್ಪಿ ನಿಶಾ ಜೇಮ್ಸ್ ” ಬೋಟ್ ತಪ್ಪಿ ನಾಲ್ವರು ದ್ವೀಪದಲ್ಲೆ ಉಳಿದ ವಿಷಯ ವಿಚಾರಣೆಯ ವೇಳೆ ತಿಳಿದು ಬಂದಿದೆ.ಈ ಪ್ರಕರಣಕ್ಕೆ ಸಂಬಂಧಿಸಿ ಕೇರಳ ರಾಜ್ಯ ಪೊಲೀಸರಿಂದ ಮಾಹಿತಿ ಕಲೆ ಹಾಕಲಾಗಿದೆ. ಕೇರಳ ಪೊಲೀಸರು ನೀಡಿರುವ ಹೇಳಿಕೆ ಹೊಂದಾಣಿಕೆ ಆದ ಕಾರಣದಿಂದ ಆ ನಾಲ್ವರನ್ನು ಕೇರಳಕ್ಕೆ ಕಳುಹಿಸಲಾಗಿದೆ. ಈ ವಿಚಾರದಲ್ಲಿ ಮೇಲ್ನೋಟಕ್ಕೆ ಟೆಂಡರ್ ವಹಿಸಿಕೊಂಡಿರುವ ಪ್ರವಾಸಿ ಬೋಟ್ ನ ನಿರ್ಲಕ್ಷ ಸಾಬೀತಾಗಿದ್ದು ಈ ಕುರಿತು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಗೆ ವಿಚಾರಣೆ ನಡೆಸಲು ಕೇಳುತ್ತೇವೆ ಎಂದು ಹೇಳಿದ್ದಾರೆ.

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

4 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

16 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

42 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

50 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

1 hour ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

1 hour ago