ಮಲ್ಪೆ: ತಮ್ಮ ಮನೆಯವರು ಕಾಯಿಲೆಗೆ ತುತ್ತಾಗಿದ್ದಾರೆ. ಚಿಕಿತ್ಸೆಗೆ ಹಣ ಇಲ್ಲ, ಹಣ ಸಂಗ್ರಹಿಸಿ ಕೊಡುತ್ತೇನೆಂದು ಬೆಂಗಳೂರಿನಿದ ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದ ವ್ಯಕ್ತಿ ಈಗ ನಾಪತ್ತೆಯಾಗಿದ್ದಾನೆ. ಹೀಗೆ ಮಾತಿನಲ್ಲೇ ಮರಳು ಮಾಡುವ ತಂಡವೊಂದು ಹಲವರನ್ನು ತಮ್ಮ ಕಟ್ಟುಕತೆಗಳಿಂದಲೇ ನಂಬಿಸಿ ಹಣ ಪೀಕಿಸಿ ವಂಚಿಸಿದ ಘಟನೆ ಮಲ್ಪೆ ಬಂದರು ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಮಗುವಿನ ಜತೆಯಲ್ಲಿ ಗಂಡ-ಹೆಂಡತಿ ಎಂದು ಹೇಳಿಕೊಂಡು ಮಲ್ಪೆಗೆ ಬಂದಿದ್ದ ಈ ತಂಡದವರು ಆಂಧ್ರಪ್ರದೇಶದವರು ಎಂದು ಹೇಳಲಾಗುತ್ತಿದೆ. ಬಂದರಿನಲ್ಲಿ ಮುಳುಗು ತಜ್ಞ ಈಶ್ವರ ಮಲ್ಪೆ ಅವರನ್ನು ಭೇಟಿಯಾಗಿ ಅವರಲ್ಲಿ ತಮ್ಮ ವಿಚಾರವನ್ನು ಹೇಳಿಕೊಂಡಿದ್ದರು. ನಮಗೆ ಬಂಧು-ಬಳಗ ಯಾರೂ ಇಲ್ಲ, ತಾಯಿ ಆಸ್ಪತ್ರೆಯಲ್ಲಿದ್ದಾರೆ. ತಮ್ಮ ಕೈಲಾದ ನೆರವನ್ನು ನೀಡಿ ಸಹಕರಿಸುವಂತೆ ವಿನಂತಿಸಿದ್ದರು. ಅವರು ಸುಮಾರು 2 ಸಾವಿರ ರೂಪಾಯಿ ಸಂಗ್ರಹಿಸಿ ಅವರಿಗೆ ನೀಡಿ ರೈಲು ನಿಲ್ದಾಣಕ್ಕೆ ಕಳುಹಿಸಿ ಕೊಟ್ಟಿದ್ದರು. ಮಲ್ಪೆ ಬಂದರಿನಲ್ಲಿ ನಾನಾ ಕಥೆ ಕಟ್ಟಿದ ಈ ತಂಡ ಬೇರೆ ಬೇರೆ ಜನರಿಂದ ಸಾವಿರಾರು ರೂ. ಪಡೆದುಕೊಂಡಿದೆ ಎನ್ನಲಾಗುತ್ತಿದೆ.
ಬಂಟ್ವಾಳ: ಶಾಸಕ ಹರೀಶ್ ಪೂಂಜಾ ಕೊಲೆ ಯತ್ನ ಪ್ರಕರಣ..ಸಿಐಡಿ ತನಿಖೆ ಆರಂಭ – Vishwanews24
ಮಹಿಳೆ, ಮಕ್ಕಳನ್ನು ಜತೆಗೆ ಕರೆದುಕೊಂಡು ಬಂದು ಜನರನ್ನು ಯಾಮಾರಿಸಿ ದುಡ್ಡು ಪಡೆಯುವ ತಂಡ ಕರಾವಳಿಯಲ್ಲಿ ಮತ್ತೆ ಸಕ್ರಿಯವಾಗುತ್ತಿದೆ. ಈ ಹಿಂದೆ ಹಲವೆಡೆಗಳಲ್ಲಿ ಹೆಚ್ಚಾಗಿ ರಾತ್ರಿ ಹೊತ್ತು ಜನರಲ್ಲಿಗೆ ಬಂದು ಯಾವುದಾದರೊಂದು ಕಷ್ಟಗಳನ್ನು (ಕಟ್ಟುಕತೆ) ಹೇಳಿ ಅವರು ಹಣ ನೀಡುವಲ್ಲಿಯವರೆಗೆ ತಮ್ಮ ಗೋಳನ್ನು ಮುಂದುವರಿಸುತ್ತಲೇ ಇರುತ್ತಾರೆ. ಇಂತಹವರ ಬಗ್ಗೆ ಪೊಲೀಸರೂ ನಿಗಾ ವಹಿಸಬೇಕಿದೆ. ಜನರು ಕೂಡ ಮಹಿಳೆ, ಮಕ್ಕಳನ್ನು ಮುಂದೆ ಬಿಟ್ಟು ಕಷ್ಟದ ಕಥೆ-ವ್ಯಥೆಗಳನ್ನು ಹೇಳುವವರ ಬಗ್ಗೆ ಎಚ್ಚರ ವಹಿಸಬೇಕಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…