Featured

ಮಲ್ಪೆ: ತಮ್ಮ ಮನೆಯವರು ಕಾಯಿಲೆಗೆ ತುತ್ತಾಗಿದ್ದಾರೆಂದು ನಂಬಿಸಿ ಜನರಿಂದ ದುಡ್ಡು ಪಡೆಯುವ ವಂಚಕರ ತಂಡ ಕರಾವಳಿಯಲ್ಲಿ ಸಕ್ರಿಯ – ಎಚ್ಚರ – Vishwanews24

ಮಲ್ಪೆ: ಕರಾವಳಿಯಲ್ಲಿ ತಮ್ಮ ಮನೆಯವರು ಕಾಯಿಲೆಗೆ ತುತ್ತಾಗಿದ್ದಾರೆಂದು ನಂಬಿಸಿ ಜನರಿಂದ ದುಡ್ಡು ಪಡೆಯುವ ವಂಚಕರ ತಂಡ ಸಕ್ರಿಯ-ಎಚ್ಚರ

ಮಲ್ಪೆ: ತಮ್ಮ ಮನೆಯವರು ಕಾಯಿಲೆಗೆ ತುತ್ತಾಗಿದ್ದಾರೆ. ಚಿಕಿತ್ಸೆಗೆ ಹಣ ಇಲ್ಲ, ಹಣ ಸಂಗ್ರಹಿಸಿ ಕೊಡುತ್ತೇನೆಂದು ಬೆಂಗಳೂರಿನಿದ ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದ ವ್ಯಕ್ತಿ ಈಗ ನಾಪತ್ತೆಯಾಗಿದ್ದಾನೆ. ಹೀಗೆ ಮಾತಿನಲ್ಲೇ ಮರಳು ಮಾಡುವ ತಂಡವೊಂದು ಹಲವರನ್ನು ತಮ್ಮ ಕಟ್ಟುಕತೆಗಳಿಂದಲೇ ನಂಬಿಸಿ ಹಣ ಪೀಕಿಸಿ ವಂಚಿಸಿದ ಘಟನೆ ಮಲ್ಪೆ ಬಂದರು ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

ಮಗುವಿನ ಜತೆಯಲ್ಲಿ ಗಂಡ-ಹೆಂಡತಿ ಎಂದು ಹೇಳಿಕೊಂಡು ಮಲ್ಪೆಗೆ ಬಂದಿದ್ದ ಈ ತಂಡದವರು ಆಂಧ್ರಪ್ರದೇಶದವರು ಎಂದು ಹೇಳಲಾಗುತ್ತಿದೆ. ಬಂದರಿನಲ್ಲಿ ಮುಳುಗು ತಜ್ಞ ಈಶ್ವರ ಮಲ್ಪೆ ಅವರನ್ನು ಭೇಟಿಯಾಗಿ ಅವರಲ್ಲಿ ತಮ್ಮ ವಿಚಾರವನ್ನು ಹೇಳಿಕೊಂಡಿದ್ದರು. ನಮಗೆ ಬಂಧು-ಬಳಗ ಯಾರೂ ಇಲ್ಲ, ತಾಯಿ ಆಸ್ಪತ್ರೆಯಲ್ಲಿದ್ದಾರೆ. ತಮ್ಮ ಕೈಲಾದ ನೆರವನ್ನು ನೀಡಿ ಸಹಕರಿಸುವಂತೆ ವಿನಂತಿಸಿದ್ದರು. ಅವರು ಸುಮಾರು 2 ಸಾವಿರ ರೂಪಾಯಿ ಸಂಗ್ರಹಿಸಿ ಅವರಿಗೆ ನೀಡಿ ರೈಲು ನಿಲ್ದಾಣಕ್ಕೆ ಕಳುಹಿಸಿ ಕೊಟ್ಟಿದ್ದರು. ಮಲ್ಪೆ ಬಂದರಿನಲ್ಲಿ ನಾನಾ ಕಥೆ ಕಟ್ಟಿದ ಈ ತಂಡ ಬೇರೆ ಬೇರೆ ಜನರಿಂದ ಸಾವಿರಾರು ರೂ. ಪಡೆದುಕೊಂಡಿದೆ ಎನ್ನಲಾಗುತ್ತಿದೆ.

ಬಂಟ್ವಾಳ: ಶಾಸಕ ಹರೀಶ್ ಪೂಂಜಾ ಕೊಲೆ ಯತ್ನ ಪ್ರಕರಣ..ಸಿಐಡಿ ತನಿಖೆ ಆರಂಭ – Vishwanews24

ಮಹಿಳೆ, ಮಕ್ಕಳನ್ನು ಜತೆಗೆ ಕರೆದುಕೊಂಡು ಬಂದು ಜನರನ್ನು ಯಾಮಾರಿಸಿ ದುಡ್ಡು ಪಡೆಯುವ ತಂಡ ಕರಾವಳಿಯಲ್ಲಿ ಮತ್ತೆ ಸಕ್ರಿಯವಾಗುತ್ತಿದೆ. ಈ ಹಿಂದೆ ಹಲವೆಡೆಗಳಲ್ಲಿ ಹೆಚ್ಚಾಗಿ ರಾತ್ರಿ ಹೊತ್ತು ಜನರಲ್ಲಿಗೆ ಬಂದು ಯಾವುದಾದರೊಂದು ಕಷ್ಟಗಳನ್ನು (ಕಟ್ಟುಕತೆ) ಹೇಳಿ ಅವರು ಹಣ ನೀಡುವಲ್ಲಿಯವರೆಗೆ ತಮ್ಮ ಗೋಳನ್ನು ಮುಂದುವರಿಸುತ್ತಲೇ ಇರುತ್ತಾರೆ. ಇಂತಹವರ ಬಗ್ಗೆ ಪೊಲೀಸರೂ ನಿಗಾ ವಹಿಸಬೇಕಿದೆ. ಜನರು ಕೂಡ ಮಹಿಳೆ, ಮಕ್ಕಳನ್ನು ಮುಂದೆ ಬಿಟ್ಟು ಕಷ್ಟದ ಕಥೆ-ವ್ಯಥೆಗಳನ್ನು ಹೇಳುವವರ ಬಗ್ಗೆ ಎಚ್ಚರ ವಹಿಸಬೇಕಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago