Featured

ಮಲ್ಪೆ: ನಕಲಿ ದಾಖಲಾತಿ ಸೃಷ್ಟಿಸಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳ ಬಂಧನ – vishwanews24

ಮಲ್ಪೆ: ನಕಲಿ ದಾಖಲಾತಿ ಸೃಷ್ಟಿಸಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳ ಬಂಧನ

ಉಡುಪಿ:  ಮಲ್ಪೆ ವಡಬಾಂಡೇಶ್ವರ ಬಸ್‌ ನಿಲ್ದಾಣ ಬಳಿ ಒಂಬತ್ತು ಮಂದಿ ಬಾಂಗ್ಲಾದೇಶಿಯರನ್ನು ಪೊಲೀಸರು ಶುಕ್ರವಾರ (ಅ.11) ಬಂಧಿಸಿದ್ದಾರೆ. ಇವರು ಮಲ್ಪೆಗೆ ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದಿದ್ದರು.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ಪ್ರಯತ್ನಿಸಿದ್ದ ಮಹಮ್ಮದ್ ಮಾಣಿಕ್ ಎಂಬಾತನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ಮಲ್ಪೆಯಲ್ಲಿ ಇರುವವರ ಬಗ್ಗೆ ಮಾಹಿತಿ ನೀಡಿದ್ದ. ಇಮಿಗ್ರೇಷನ್ ಅಧಿಕಾರಿಗಳ ಪರಿಶೀಲನೆ ವೇಳೆ ಈತ ಬಾಂಗ್ಲಾದೇಶದ ಮಾಣಿಕ್ ಚೌಕ್ ರಾಜಶಾಹಿ ಎಂದು ತಿಳಿದುಬಂದಿದೆ. ಈತನ ವಿಚಾರಣೆ ವೇಳೆ ಹಲವರು ಮಲ್ಪೆಯಲ್ಲಿರುವುದು ಪತ್ತೆಯಾಗಿದೆ.

ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್‌, ಮೊಹಮ್ಮದ್ ಸೋಜಿಬ್, ಕಾಜೋಲ್‌, ಉಸ್ಮಾನ್ ಬಂಧಿತರು. ಇವರು ನಕಲಿ ದಾಖಲಾತಿ ಸೃಷ್ಟಿಸಿ ಮಲ್ಪೆಯಲ್ಲಿ ತಂಗಿದ್ದರು. ಆರೋಪಿಗಳ ಬಳಿ ನಕಲಿ ಆಧಾ‌ರ್ ಕಾರ್ಡ್ ಪತ್ತೆಯಾಗಿದೆ. ಆರೋಪಿ ಉಸ್ಮಾನ್ ಎಂಬಾತ ಅಕ್ರಮವಾಗಿ ಕರೆತಂದು ಇವರಿಗೆ ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ. ಇವರನ್ನು ವಶಕ್ಕೆ ಪಡೆದಿರುವ ಮಲ್ಪೆ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago