ಉಡುಪಿ: ಜಿಲ್ಲೆಯ ಮಲ್ಪೆ ಸಮೀಪದ ಪಡು ತೋನ್ಸೆ ಗ್ರಾಮದ ಕಂಬಳ ತೋಟ ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದವರ ವಿರುದ್ಧ ಗಣಿ ಇಲಾಖೆ ಕಾರ್ಯಾಚರಣೆ ನಡೆಸಿದೆ.
ಇಲ್ಲಿ ಹರಿಯುವ ಸ್ವರ್ಣಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುವ ಬಗ್ಗೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಗಣಿ ಇಲಾಖಾ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಮರಳುಗಾರಿಕೆ ನಡೆಸುತ್ತಿದ್ದವರು ಪರಾರಿಯಾಗಿದ್ದಾರೆ. ಆದರೆ ನಾಲ್ಕು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಎರಡು ಪುಟ್ಟ ದೋಣಿಗಳನ್ನು ಮಲ್ಪೆ ಠಾಣೆಗೆ ವರ್ಗಾಯಿಸಿದ್ದು, ಬೃಹತ್ ಗಾತ್ರದ ಎರಡು ದೋಣಿಗಳನ್ನು ಕ್ರೈನ್ ಮೂಲಕ ಮೇಲಕ್ಕೆತ್ತಲಾಗಿದೆ.
ಇರ್ಷಾದ್ ಎಂಬಾತ ಇಲ್ಲಿ ಅಕ್ರಮ ಮರಳುಗಾರಿಕೆ ನಡೆಸುವ ಬಗ್ಗೆ ಈ ಹಿಂದೆಯೂ ದೂರು ಕೇಳಿಬಂದಿತ್ತು. ಒಂದು ಬಾರಿ ಇಲ್ಲಿ ಕಾರ್ಯಾಚರಣೆಯನ್ನು ನಡೆಸಿ ಸೀಜ್ ಮಾಡಲಾಗಿತ್ತು.ಗಣಿ ಅಧಿಕಾರಿಗಳು ದಂಡವನ್ನೂ ಹಾಕಿದ್ದರು.ಅಷ್ಟು ಮಾತ್ರವಲ್ಲದೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರವಾಗಿಯೂ ದೂರು ದಾಖಲಿಸಿಕೊಳ್ಳಲಾಗಿತ್ತು. ಇಷ್ಟಾದರೂ ಇರ್ಷಾದ್ ಅಕ್ರಮ ಮರಳುಗಾರಿಕೆ ನಿಲ್ಲಿಸಿರಲಿಲ್ಲ. ಉತ್ತರ ಪ್ರದೇಶದ ಕಾರ್ಮಿಕರನ್ನು ಬಳಸಿ ನಿರಂತರ ಮರಳುಗಾರಿಕೆ ನಡೆಸುತ್ತಲೇ ಇದ್ದ. ಇದೀಗ ಗಣಿ ಅಧಿಕಾರಿ ಮಹೇಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು ಮಲ್ಪೆ ಠಾಣೆಗೆ ಪ್ರಕರಣ ವರ್ಗಾಯಿಸಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…