ಉಡುಪಿ: ಜಿಲ್ಲೆಯ ಮಲ್ಪೆ ಸಮೀಪದ ಪಡು ತೋನ್ಸೆ ಗ್ರಾಮದ ಕಂಬಳ ತೋಟ ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದವರ ವಿರುದ್ಧ ಗಣಿ ಇಲಾಖೆ ಕಾರ್ಯಾಚರಣೆ ನಡೆಸಿದೆ.
ಇಲ್ಲಿ ಹರಿಯುವ ಸ್ವರ್ಣಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುವ ಬಗ್ಗೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಗಣಿ ಇಲಾಖಾ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಮರಳುಗಾರಿಕೆ ನಡೆಸುತ್ತಿದ್ದವರು ಪರಾರಿಯಾಗಿದ್ದಾರೆ. ಆದರೆ ನಾಲ್ಕು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಎರಡು ಪುಟ್ಟ ದೋಣಿಗಳನ್ನು ಮಲ್ಪೆ ಠಾಣೆಗೆ ವರ್ಗಾಯಿಸಿದ್ದು, ಬೃಹತ್ ಗಾತ್ರದ ಎರಡು ದೋಣಿಗಳನ್ನು ಕ್ರೈನ್ ಮೂಲಕ ಮೇಲಕ್ಕೆತ್ತಲಾಗಿದೆ.
ಇರ್ಷಾದ್ ಎಂಬಾತ ಇಲ್ಲಿ ಅಕ್ರಮ ಮರಳುಗಾರಿಕೆ ನಡೆಸುವ ಬಗ್ಗೆ ಈ ಹಿಂದೆಯೂ ದೂರು ಕೇಳಿಬಂದಿತ್ತು. ಒಂದು ಬಾರಿ ಇಲ್ಲಿ ಕಾರ್ಯಾಚರಣೆಯನ್ನು ನಡೆಸಿ ಸೀಜ್ ಮಾಡಲಾಗಿತ್ತು.ಗಣಿ ಅಧಿಕಾರಿಗಳು ದಂಡವನ್ನೂ ಹಾಕಿದ್ದರು.ಅಷ್ಟು ಮಾತ್ರವಲ್ಲದೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರವಾಗಿಯೂ ದೂರು ದಾಖಲಿಸಿಕೊಳ್ಳಲಾಗಿತ್ತು. ಇಷ್ಟಾದರೂ ಇರ್ಷಾದ್ ಅಕ್ರಮ ಮರಳುಗಾರಿಕೆ ನಿಲ್ಲಿಸಿರಲಿಲ್ಲ. ಉತ್ತರ ಪ್ರದೇಶದ ಕಾರ್ಮಿಕರನ್ನು ಬಳಸಿ ನಿರಂತರ ಮರಳುಗಾರಿಕೆ ನಡೆಸುತ್ತಲೇ ಇದ್ದ. ಇದೀಗ ಗಣಿ ಅಧಿಕಾರಿ ಮಹೇಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು ಮಲ್ಪೆ ಠಾಣೆಗೆ ಪ್ರಕರಣ ವರ್ಗಾಯಿಸಲಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…