Featured

ಮಲ್ಪೆ : ಪಡು ತೋನ್ಸೆ ಬಳಿ ಅಕ್ರಮ ಮರಳುಗಾರಿಕೆ : 4 ದೋಣಿ ವಶ -Vishwanews24

ಉಡುಪಿ: ಪಡು ತೋನ್ಸೆ ಬಳಿ ಅಕ್ರಮ ಮರಳುಗಾರಿಕೆ : 4 ದೋಣಿ ವಶ -Vishwanews24

ಉಡುಪಿ: ಜಿಲ್ಲೆಯ ಮಲ್ಪೆ ಸಮೀಪದ ಪಡು ತೋನ್ಸೆ ಗ್ರಾಮದ ಕಂಬಳ ತೋಟ ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದವರ ವಿರುದ್ಧ ಗಣಿ ಇಲಾಖೆ ಕಾರ್ಯಾಚರಣೆ ನಡೆಸಿದೆ.

ಇಲ್ಲಿ ಹರಿಯುವ ಸ್ವರ್ಣಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುವ ಬಗ್ಗೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಗಣಿ ಇಲಾಖಾ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಮರಳುಗಾರಿಕೆ ನಡೆಸುತ್ತಿದ್ದವರು ಪರಾರಿಯಾಗಿದ್ದಾರೆ. ಆದರೆ ನಾಲ್ಕು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಎರಡು ಪುಟ್ಟ ದೋಣಿಗಳನ್ನು ಮಲ್ಪೆ ಠಾಣೆಗೆ ವರ್ಗಾಯಿಸಿದ್ದು, ಬೃಹತ್ ಗಾತ್ರದ ಎರಡು ದೋಣಿಗಳನ್ನು ಕ್ರೈನ್ ಮೂಲಕ ಮೇಲಕ್ಕೆತ್ತಲಾಗಿದೆ.

ಇರ್ಷಾದ್ ಎಂಬಾತ ಇಲ್ಲಿ ಅಕ್ರಮ ಮರಳುಗಾರಿಕೆ ನಡೆಸುವ ಬಗ್ಗೆ ಈ ಹಿಂದೆಯೂ ದೂರು ಕೇಳಿಬಂದಿತ್ತು. ಒಂದು ಬಾರಿ ಇಲ್ಲಿ ಕಾರ್ಯಾಚರಣೆಯನ್ನು ನಡೆಸಿ ಸೀಜ್ ಮಾಡಲಾಗಿತ್ತು.ಗಣಿ ಅಧಿಕಾರಿಗಳು ದಂಡವನ್ನೂ ಹಾಕಿದ್ದರು.ಅಷ್ಟು ಮಾತ್ರವಲ್ಲದೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರವಾಗಿಯೂ ದೂರು ದಾಖಲಿಸಿಕೊಳ್ಳಲಾಗಿತ್ತು. ಇಷ್ಟಾದರೂ ಇರ್ಷಾದ್ ಅಕ್ರಮ ಮರಳುಗಾರಿಕೆ ನಿಲ್ಲಿಸಿರಲಿಲ್ಲ. ಉತ್ತರ ಪ್ರದೇಶದ ಕಾರ್ಮಿಕರನ್ನು ಬಳಸಿ ನಿರಂತರ ಮರಳುಗಾರಿಕೆ ನಡೆಸುತ್ತಲೇ ಇದ್ದ. ಇದೀಗ ಗಣಿ ಅಧಿಕಾರಿ ಮಹೇಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು ಮಲ್ಪೆ ಠಾಣೆಗೆ ಪ್ರಕರಣ ವರ್ಗಾಯಿಸಲಾಗಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

9 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

9 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

10 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

10 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

10 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

10 hours ago