ಮಲ್ಪೆ: ಇಲ್ಲಿನ ಬಂದರಿನಲ್ಲಿ ಕಳೆದ ಎಂಟು ವರ್ಷಗಳಿಂದ ಬೋಟುಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಮತ್ತು ನೂರಾರು ಮಂದಿಯ ಪ್ರಾಣಕ್ಕೆರವಾಗಿದ್ದ ಹೂಳನ್ನು ಮೇಲೆತ್ತುವ ಪ್ರಕ್ರಿಯೆ ಕೊನೆಗೂ ಆರಂಭಗೊಂಡಿದೆ.
ಗುತ್ತಿಗೆ ಪಡೆದಿರುವ ಗೋವಾ ಮೂಲದ ಭಾರ್ಗವಿ ಕಂಪೆನಿಯ ಯಂತ್ರಗಳು ಬಂದರಿನ 3 ಬೇಸಿನ್ಗಳಲ್ಲಿ ಮತ್ತು ನ್ಯಾವಿಗೇಶನ್ ಚಾನೆಲ್ಗಳಲ್ಲಿ ತುಂಬಿಕೊಂಡಿರುವ ಸುಮಾರು 96 ಸಾವಿರ ಕ್ಯೂಬಿಕ್ ಮೀ. ಹೂಳನ್ನು ತೆರವುಗೊಳಿಸಲಾರಂಭಿಸಿವೆ.
ಸದ್ಯ 2 ಯಂತ್ರಗಳು, 30ಕ್ಕೂ ಹೆಚ್ಚು ಸಿಬಂದಿ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಬೇಸಿನ್ 1 ಮತ್ತು 2ರಿಂದ ತೆಗೆದ ಹೂಳನ್ನು ದಕ್ಕೆಯಲ್ಲಿ ಸಂಗ್ರಹಿಸಲಾಗುತ್ತದೆ. ಇದಕ್ಕೆ ಉತ್ತಮ ಬೇಡಿಕೆ ಇರುವುದರಿಂದ ಒಣಗಿದ ಬಳಿಕ ಸ್ಥಳಾಂತರ ಮಾಡಲಾಗುತ್ತದೆ. ಬಂದರು ಪ್ರದೇಶದಿಂದ ತೆರವುಗೊಳಿಸಿದ ಹೂಳನ್ನು ಬಾರ್ಜ್ನ ಮೂಲಕ ಸುಮಾರು 8 ಕಿ.ಮೀ. ದೂರ ಅಳಸಮುದ್ರಕ್ಕೆ ಒಯ್ದು ಅಲ್ಲಿ ಸುರಿಯಲಾಗುತ್ತದೆ.
ಬಂದರಿನ ಹೂಳೆತ್ತುವುದು ಮೀನುಗಾರರ ಬಹುಕಾಲದ ಬೇಡಿಕೆಯಾಗಿತ್ತು. ಇದೀಗ ಸರಕಾರದ ಮೇಲೆ ಒತ್ತಡ ಹೇರಿದ್ದರಿಂದ ಕೆಲಸ ಆರಂಭವಾಗಿದೆ. ಮೇ ಅಂತ್ಯದಲ್ಲಿ ಕೆಲಸ ಪೂರ್ಣಗೊಳ್ಳಲಿದೆ ಎಂದು ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ.
ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…
ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…
ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…
ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್ನಿಂದ…
ಪುತ್ತೂರು: ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್ಗಳ…