Featured

ಮಲ್ಪೆ :  ಬಂದರಿನಲ್ಲಿ ಹೂಳೆತ್ತುವ ಪ್ರಕ್ರಿಯೆ ಕೊನೆಗೂ ಆರಂಭ ;- ಮೇ ಅಂತ್ಯಕ್ಕೆ ಪೂರ್ಣ – Vishwanews24

ಮಲ್ಪೆ :  ಬಂದರಿನಲ್ಲಿ ಹೂಳೆತ್ತುವ ಪ್ರಕ್ರಿಯೆ ಕೊನೆಗೂ ಆರಂಭ – ಮೇ ಅಂತ್ಯಕ್ಕೆ ಪೂರ್ಣ

ಮಲ್ಪೆ: ಇಲ್ಲಿನ ಬಂದರಿನಲ್ಲಿ ಕಳೆದ ಎಂಟು ವರ್ಷಗಳಿಂದ ಬೋಟುಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಮತ್ತು ನೂರಾರು ಮಂದಿಯ ಪ್ರಾಣಕ್ಕೆರವಾಗಿದ್ದ ಹೂಳನ್ನು ಮೇಲೆತ್ತುವ ಪ್ರಕ್ರಿಯೆ ಕೊನೆಗೂ ಆರಂಭಗೊಂಡಿದೆ.

ಗುತ್ತಿಗೆ ಪಡೆದಿರುವ ಗೋವಾ ಮೂಲದ ಭಾರ್ಗವಿ ಕಂಪೆನಿಯ ಯಂತ್ರಗಳು ಬಂದರಿನ 3 ಬೇಸಿನ್‌ಗಳಲ್ಲಿ ಮತ್ತು ನ್ಯಾವಿಗೇಶನ್‌ ಚಾನೆಲ್‌ಗ‌ಳಲ್ಲಿ ತುಂಬಿಕೊಂಡಿರುವ ಸುಮಾರು 96 ಸಾವಿರ ಕ್ಯೂಬಿಕ್‌ ಮೀ. ಹೂಳನ್ನು ತೆರವುಗೊಳಿಸಲಾರಂಭಿಸಿವೆ.

ಸದ್ಯ 2 ಯಂತ್ರಗಳು, 30ಕ್ಕೂ ಹೆಚ್ಚು ಸಿಬಂದಿ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಬೇಸಿನ್‌ 1 ಮತ್ತು 2ರಿಂದ ತೆಗೆದ ಹೂಳನ್ನು ದಕ್ಕೆಯಲ್ಲಿ ಸಂಗ್ರಹಿಸಲಾಗುತ್ತದೆ. ಇದಕ್ಕೆ ಉತ್ತಮ ಬೇಡಿಕೆ ಇರುವುದರಿಂದ ಒಣಗಿದ ಬಳಿಕ ಸ್ಥಳಾಂತರ ಮಾಡಲಾಗುತ್ತದೆ. ಬಂದರು ಪ್ರದೇಶದಿಂದ ತೆರವುಗೊಳಿಸಿದ ಹೂಳನ್ನು ಬಾರ್ಜ್‌ನ ಮೂಲಕ ಸುಮಾರು 8 ಕಿ.ಮೀ. ದೂರ ಅಳಸಮುದ್ರಕ್ಕೆ ಒಯ್ದು ಅಲ್ಲಿ ಸುರಿಯಲಾಗುತ್ತದೆ.

ಬಂದರಿನ ಹೂಳೆತ್ತುವುದು ಮೀನುಗಾರರ ಬಹುಕಾಲದ ಬೇಡಿಕೆಯಾಗಿತ್ತು. ಇದೀಗ ಸರಕಾರದ ಮೇಲೆ ಒತ್ತಡ ಹೇರಿದ್ದರಿಂದ ಕೆಲಸ ಆರಂಭವಾಗಿದೆ. ಮೇ ಅಂತ್ಯದಲ್ಲಿ ಕೆಲಸ ಪೂರ್ಣಗೊಳ್ಳಲಿದೆ ಎಂದು ಶಾಸಕ ಕೆ. ರಘುಪತಿ ಭಟ್‌ ತಿಳಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago