ಮಲ್ಪೆ: ಇಲ್ಲಿನ ಬಂದರಿನಲ್ಲಿ ಕಳೆದ ಎಂಟು ವರ್ಷಗಳಿಂದ ಬೋಟುಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಮತ್ತು ನೂರಾರು ಮಂದಿಯ ಪ್ರಾಣಕ್ಕೆರವಾಗಿದ್ದ ಹೂಳನ್ನು ಮೇಲೆತ್ತುವ ಪ್ರಕ್ರಿಯೆ ಕೊನೆಗೂ ಆರಂಭಗೊಂಡಿದೆ.
ಗುತ್ತಿಗೆ ಪಡೆದಿರುವ ಗೋವಾ ಮೂಲದ ಭಾರ್ಗವಿ ಕಂಪೆನಿಯ ಯಂತ್ರಗಳು ಬಂದರಿನ 3 ಬೇಸಿನ್ಗಳಲ್ಲಿ ಮತ್ತು ನ್ಯಾವಿಗೇಶನ್ ಚಾನೆಲ್ಗಳಲ್ಲಿ ತುಂಬಿಕೊಂಡಿರುವ ಸುಮಾರು 96 ಸಾವಿರ ಕ್ಯೂಬಿಕ್ ಮೀ. ಹೂಳನ್ನು ತೆರವುಗೊಳಿಸಲಾರಂಭಿಸಿವೆ.
ಸದ್ಯ 2 ಯಂತ್ರಗಳು, 30ಕ್ಕೂ ಹೆಚ್ಚು ಸಿಬಂದಿ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಬೇಸಿನ್ 1 ಮತ್ತು 2ರಿಂದ ತೆಗೆದ ಹೂಳನ್ನು ದಕ್ಕೆಯಲ್ಲಿ ಸಂಗ್ರಹಿಸಲಾಗುತ್ತದೆ. ಇದಕ್ಕೆ ಉತ್ತಮ ಬೇಡಿಕೆ ಇರುವುದರಿಂದ ಒಣಗಿದ ಬಳಿಕ ಸ್ಥಳಾಂತರ ಮಾಡಲಾಗುತ್ತದೆ. ಬಂದರು ಪ್ರದೇಶದಿಂದ ತೆರವುಗೊಳಿಸಿದ ಹೂಳನ್ನು ಬಾರ್ಜ್ನ ಮೂಲಕ ಸುಮಾರು 8 ಕಿ.ಮೀ. ದೂರ ಅಳಸಮುದ್ರಕ್ಕೆ ಒಯ್ದು ಅಲ್ಲಿ ಸುರಿಯಲಾಗುತ್ತದೆ.
ಬಂದರಿನ ಹೂಳೆತ್ತುವುದು ಮೀನುಗಾರರ ಬಹುಕಾಲದ ಬೇಡಿಕೆಯಾಗಿತ್ತು. ಇದೀಗ ಸರಕಾರದ ಮೇಲೆ ಒತ್ತಡ ಹೇರಿದ್ದರಿಂದ ಕೆಲಸ ಆರಂಭವಾಗಿದೆ. ಮೇ ಅಂತ್ಯದಲ್ಲಿ ಕೆಲಸ ಪೂರ್ಣಗೊಳ್ಳಲಿದೆ ಎಂದು ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…