Featured

ಮಲ್ಪೆ :  ಬಂದರಿನಲ್ಲಿ ಹೂಳೆತ್ತುವ ಪ್ರಕ್ರಿಯೆ ಕೊನೆಗೂ ಆರಂಭ ;- ಮೇ ಅಂತ್ಯಕ್ಕೆ ಪೂರ್ಣ – Vishwanews24

ಮಲ್ಪೆ :  ಬಂದರಿನಲ್ಲಿ ಹೂಳೆತ್ತುವ ಪ್ರಕ್ರಿಯೆ ಕೊನೆಗೂ ಆರಂಭ – ಮೇ ಅಂತ್ಯಕ್ಕೆ ಪೂರ್ಣ

ಮಲ್ಪೆ: ಇಲ್ಲಿನ ಬಂದರಿನಲ್ಲಿ ಕಳೆದ ಎಂಟು ವರ್ಷಗಳಿಂದ ಬೋಟುಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಮತ್ತು ನೂರಾರು ಮಂದಿಯ ಪ್ರಾಣಕ್ಕೆರವಾಗಿದ್ದ ಹೂಳನ್ನು ಮೇಲೆತ್ತುವ ಪ್ರಕ್ರಿಯೆ ಕೊನೆಗೂ ಆರಂಭಗೊಂಡಿದೆ.

ಗುತ್ತಿಗೆ ಪಡೆದಿರುವ ಗೋವಾ ಮೂಲದ ಭಾರ್ಗವಿ ಕಂಪೆನಿಯ ಯಂತ್ರಗಳು ಬಂದರಿನ 3 ಬೇಸಿನ್‌ಗಳಲ್ಲಿ ಮತ್ತು ನ್ಯಾವಿಗೇಶನ್‌ ಚಾನೆಲ್‌ಗ‌ಳಲ್ಲಿ ತುಂಬಿಕೊಂಡಿರುವ ಸುಮಾರು 96 ಸಾವಿರ ಕ್ಯೂಬಿಕ್‌ ಮೀ. ಹೂಳನ್ನು ತೆರವುಗೊಳಿಸಲಾರಂಭಿಸಿವೆ.

ಸದ್ಯ 2 ಯಂತ್ರಗಳು, 30ಕ್ಕೂ ಹೆಚ್ಚು ಸಿಬಂದಿ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಬೇಸಿನ್‌ 1 ಮತ್ತು 2ರಿಂದ ತೆಗೆದ ಹೂಳನ್ನು ದಕ್ಕೆಯಲ್ಲಿ ಸಂಗ್ರಹಿಸಲಾಗುತ್ತದೆ. ಇದಕ್ಕೆ ಉತ್ತಮ ಬೇಡಿಕೆ ಇರುವುದರಿಂದ ಒಣಗಿದ ಬಳಿಕ ಸ್ಥಳಾಂತರ ಮಾಡಲಾಗುತ್ತದೆ. ಬಂದರು ಪ್ರದೇಶದಿಂದ ತೆರವುಗೊಳಿಸಿದ ಹೂಳನ್ನು ಬಾರ್ಜ್‌ನ ಮೂಲಕ ಸುಮಾರು 8 ಕಿ.ಮೀ. ದೂರ ಅಳಸಮುದ್ರಕ್ಕೆ ಒಯ್ದು ಅಲ್ಲಿ ಸುರಿಯಲಾಗುತ್ತದೆ.

ಬಂದರಿನ ಹೂಳೆತ್ತುವುದು ಮೀನುಗಾರರ ಬಹುಕಾಲದ ಬೇಡಿಕೆಯಾಗಿತ್ತು. ಇದೀಗ ಸರಕಾರದ ಮೇಲೆ ಒತ್ತಡ ಹೇರಿದ್ದರಿಂದ ಕೆಲಸ ಆರಂಭವಾಗಿದೆ. ಮೇ ಅಂತ್ಯದಲ್ಲಿ ಕೆಲಸ ಪೂರ್ಣಗೊಳ್ಳಲಿದೆ ಎಂದು ಶಾಸಕ ಕೆ. ರಘುಪತಿ ಭಟ್‌ ತಿಳಿಸಿದ್ದಾರೆ.

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

7 hours ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

8 hours ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

8 hours ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

8 hours ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

10 hours ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

2 days ago