ಉಡುಪಿ: ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮೀನುಗಾರರ ಎರಡು ತಂಡಗಳ ನಡುವೆ ಮಲ್ಪೆ ಬಂದರಿನಲ್ಲಿ ಗುರುವಾರ ಹೊಡೆದಾಟ ನಡೆದಿದೆ.
ಬಾಕಿ ಇರುವ ದೊಡ್ಡಮೊತ್ತದ ಹಣವನ್ನು ವಾಪಾಸು ಕೇಳಿದ ವಿಷಯಕ್ಕೆ ಜಯೇಶ್ ಕೋಟ್ಯಾನ್ ಎಂಬಾತ ಬೋಟು ಮಾಲಕ ಛೋಟಾ ಹರೀಶ್ ಎಂಬಾತನಿಗೆ ಮಲ್ಪೆ ಬಂದರಿನಲ್ಲಿ ಸಾರ್ವಜನಿಕವಾಗಿ ಹಲ್ಲೆ ನಡೆಸಿದ್ದಾರೆ. ಇಬ್ಬರ ನಡುವೆ ಹೊಡೆದಾಟ ನಡೆದಿದೆ.
ಇಬ್ಬರೂ ಉಡುಪಿಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ನಾಲ್ವರು ಛೋಟಾ ಹರೀಶ್ ಬೆಂಬಲಿಗರು ಅಜ್ಜರಕಾಡಿನ ಸರಕಾರಿ ಆಸ್ಪತ್ರೆಗೆ ಆಗಮಿಸಿ, ಜಯೇಶ್ಗೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.
ಇದನ್ನೂ ಓದಿ:
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…