ಉಡುಪಿ: ಮಲ್ಪೆ ಬಂದರು ಪ್ರದೇಶದಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಮೀನು ಮಾರಾಟದಲ್ಲಿ ತೊಡಗಿರುವ ದೂರುಗಳುಬಂದಿರುವ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನೊಳಗೆ 14 ವರ್ಷ ಕೆಳಗಿನ ಮಕ್ಕಳಿಗೆ ಯಾವುದೇ ಕಾರಣಕ್ಕೂ ಪ್ರವೇಶ ನೀಡಲಾಗುವುದಿಲ್ಲ ಎಂದು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಕ್ಕಳ ರಕ್ಷಣಾ ಘಟಕದ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದರು.
ಮಲ್ಪೆ ವ್ಯಾಪ್ತಿಯ ಹನುಮಂತನಗರ, ನಿಟ್ಟೂರು ಮತ್ತು ಕೊಳ ಮುಂತಾದ ಕಡೆಗಳಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಬೆಳಗ್ಗಿನ ಜಾವ ಮೀನುಗಾರಿಕಾ ಬೋಟುಗಳಲ್ಲಿ ತೆರಳುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿಗೆ ಪ್ರವೇಶಿಸುವ ನಾಲ್ಕೂ ಗೇಟುಗಳಲ್ಲಿ ಮೀನುಗಾರಿಕಾ ಇಲಾಖೆ, ಮಲ್ಪೆ ಪೋಲೀಸ್, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ತೀವೃ ನಿಗಾ ಇಟ್ಟು, ಬಂದರಿನೊಳಗೆ ಪ್ರವೇಶಿಸುವ ಪ್ರತಿಯೊಂದು ವಾಹನಗಳನ್ನೂ ತಪಾಸಣೆಗೊಳಪಡಿಸಿ ಮಕ್ಕಳು ಇಲ್ಲವೆನ್ನುವುದನ್ನು ಖಚಿತಪಡಿಸಿಕೊಳ್ಳಬೇಕು. ಬಂದರು ಪ್ರವೇಶಿಸುವ ಎಲ್ಲಾ ಗೇಟುಗಳಲ್ಲಿಯೂ ಸೆಕ್ಯೂರಿಟಿ ಗಾರ್ಡಗಳನ್ನು ನಿಯೋಜಿಸಬೇಕು ಹಾಗೂ ಹೆತ್ತವರು ತಮ್ಮ ಮಕ್ಕಳನ್ನು ಯಾವುದೇ ಕಾರಣಕ್ಕೂ ಮೀನುಗಾರಿಕಾ ಬೋಟುಗಳಲ್ಲಿ ಕಳುಹಿಸಬಾರದು ಎಂದು ಆದೇಶಿಸಿದ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾಡಳಿತದ ಆದೇಶವನ್ನು ಧಿಕ್ಕರಿಸಿ ಮಕ್ಕಳನ್ನು ಬೋಟುಗಳಲ್ಲಿ ಕಳುಹಿಸಿದಲ್ಲಿ ಆ ಮಕ್ಕಳ ಹೆತ್ತವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…