ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರಿಕಾ ಚಟುವಟಿಕೆಗಳು ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಬಂದರಿನ ನೂತನ ಪ್ರವೇಶ ದ್ವಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ತಕ್ಷಣ ಆರಂಭಿಸುವಂತೆ ಮೀನುಗಾರಿಕೆ,ಬಂದರು ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ 169 ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ಮೇರೆಗೆ ಮಂಗಳವಾರ ಕಾಮಗಾರಿ ಪ್ರಾರಂಭಗೊಂಡಿದೆ.
ಬಂದರು ಪ್ರವೇಶ ದ್ವಾರ ಹಾಗೂ ರಾಷ್ಟೀಯ ಹೆದ್ದಾರಿ ಕಾಮಗಾರಿ ಬಗ್ಗೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಸೋಮವಾರ ಭೇಟಿ ನೀಡಿದ ಶಾಸಕ ಯಶ್ ಪಾಲ್ ಸುವರ್ಣ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಪೂರಕವಾಗಿ ಗೇಟ್ ಅಗಲವನ್ನು 24 ಮೀಟರ್ ಮರುವಿನ್ಯಾಸ ಮಾಡಲಾಗಿದ್ದು ರಾಷ್ಟ್ರೀಯ ಹೆದ್ದಾರಿ ಮಲ್ಪೆ ಬಂದರು ಸಂಪರ್ಕಿಸುವ ಭಾಗದಲ್ಲಿ ಕಿರು ಸೇತುವೆ ನಿರ್ಮಾಣವನ್ನು ವಿಸ್ತರಿಸಿ, ಗೇಟ್ ಹಾಗೂ ಕಿರು ಸೇತುವೆ ಕಾಮಗಾರಿಯನ್ನು ಏಕಕಾಲದಲ್ಲಿ ಆರಂಭಿಸಿ ಮೀನುಗಾರಿಕಾ ರಜೆ ಹಿನ್ನೆಲೆಯಲ್ಲಿ ಬಂದರಿನ ಚಟುವಟಿಕೆಗೆ ಸಮಸ್ಯೆಯಾಗದಂತೆ ಬಂದರು ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆ ಪೂರಕವಾಗಿ ಕೆಲಸ ಮಾಡುವಂತೆ ತಿಳಿಸಿದ್ದರು.
ಬಂದರು ಇಲಾಖೆಯ ಅಧೀನದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಅಗತ್ಯವಿರುವ ಜಾಗವನ್ನು ತಕ್ಷಣ ತೆರವು ಮಾಡಿ ಕಾಮಗಾರಿಗೆ ಅನುವು ಮಾಡಿ, ಮೆಸ್ಕಾಂ ಇಲಾಖೆಯ ಮೂಲಕ ವಿದ್ಯುತ್ ಕಂಬಗಳ ಸ್ಥಳಾಂತರ, ಬಂದರು ಪ್ರವೇಶ ಬದಲಿ ಮಾರ್ಗದ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿ, ಸುಗಮ ವಾಹನ ಸಂಚಾರ ನಿಟ್ಟಿನಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆಗೆ ಮಲ್ಪೆ ಪೊಲೀಸ್ ಉಪ ಹಾಗೂ ಅಧಿಕಾರಿಗಳಿಗೆ ಸೂಚಿಸಿದ್ದರು.
ಮಂಗಳವಾರ ಬೆಳಿಗ್ಗೆಯಿಂದಲೇ ಕಾಮಗಾರಿ ಆರಂಭಗೊಂಡಿದ್ದು, ಮಲ್ಪೆ ಮೀನುಗಾರಿಕಾ ಬಂದರಿನ ಹಳೆ ಪ್ರವೇಶ ದ್ವಾರವನ್ನು ತೆರವು ಮಾಡಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ.
ಈ ಸಂದರ್ಭದಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ಕಿಶೋರ್ ಡಿ. ಸುವರ್ಣ, ಕಾರ್ಯದರ್ಶಿ ಜಗನ್ನಾಥ ಕುಂದರ್, ಮೀನುಗಾರ ಮುಖಂಡರಾದ ರಾಮಚಂದ್ರ ಕುಂದರ್, ದಯಾನಂದ ಸುವರ್ಣ, ಕರುಣಾಕರ ಸಾಲ್ಯಾನ್, ಸುಭಾಷ್ ಮೆಂಡನ್, ಪ್ರಕಾಶ ಬಂಗೇರ, ಕೃಷ್ಣ ಕೋಟ್ಯಾನ್, ಸುರೇಶ್ ಕುಂದರ್, ಮೀನುಗಾರಿಕೆ,ಬಂದರು ಇಲಾಖೆಯ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…
ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ; ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…