ಮಲ್ಪೆ: ತೆಂಕನಿಡಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಧ್ಯಕ್ಷೆ ಶೋಭಾ ಅವರು ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಶೋಭಾ ಅವರಿಗೆ ಕಾಂಗ್ರೆಸ್ ಪಕ್ಷದ ಧ್ವಜವನ್ನು ನೀಡುವುದರ ಮೂಲಕ ಪಕ್ಷಕ್ಕೆ ಅಧಿಕೃತವಾಗಿ ಸ್ವಾಗತಿಸಿದರು.
26 ಸದಸ್ಯ ಬಲದ ತೆಂಕನಿಡಿಯೂರು ಗ್ರಾಮ ಪಂಚಾಯತ್ ನಲ್ಲಿ ಈ ಹಿಂದೆ ಬಿಜೆಪಿ ಬೆಂಬಲಿತ 14 ಸದಸ್ಯರಿದ್ದು, ಕಾಂಗ್ರೆಸ್ ಬೆಂಬಲಿತ 12 ಮಂದಿ ಸದಸ್ಯರು ಆಯ್ಕೆಯಾಗಿದ್ದು, ಎಸ್ ಟಿ ಮೀಸಲಾತಿಯಲ್ಲಿ ಶೋಭಾ ಅವರು ಬಿಜೆಪಿ ಬೆಂಬಲದೊಂದಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಪ್ರಸ್ತುತ ಕಾಂಗ್ರೆಸ್ ಸೇರ್ಪಡೆಗೊಂಡಿರುವುದರಿಂದ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ 13 ಸದಸ್ಯರೊಂದಿಗೆ ಸಮಬಲ ಸಾಧಿಸಿದ್ದು, ಪಂಚಾಯತ್ ಆಡಳಿತ ಕಾಂಗ್ರೆಸ್ ತೆಕ್ಕೆಗೆ ಬಂದಂತಾಗಿದೆ.
ಪಕ್ಷ ಸೇರ್ಪಡೆ ವೇಳೆ ಕೆಪಿಸಿಸಿ ವಕ್ತಾರಾದ ವೆರೋನಿಕಾ ಕರ್ನೆಲಿಯೋ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೆರಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್, ನಾಯಕರಾದ ಗಣೇಶ್ ನೆರ್ಗಿ, ಗೋಪಾಲಕೃಷ್ಣ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ಪಂಚಾಯತ್ ಸದಸ್ಯರಾದ ಸತೀಶ್ ನಾಯಕ್, ಸುರೇಶ್ ನಾಯಕ್, ಪ್ರಥ್ವಿರಾಜ್ ಶೆಟ್ಟಿ, ಶರತ್ ಶೆಟ್ಟಿ, ವೆಂಕಟೇಶ್ ಕುಲಾಲ್, ರವಿರಾಜ್ ಲಕ್ಷ್ಮೀನಗರ, ಮೀನಾಪಿಂಟೊ, ಸಿಂಪ್ರಿಯಾ ರೊಡ್ರಿಗಸ್, ಮಂಜುನಾಥ್ ಆಚಾರ್ಯ, ಅನುಷಾ ಆಚಾರ್ಯ, ವಿನಯ ಆಚಾರ್ಯ ಉಪಸ್ಥಿತರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…