Featured

ಮಲ್ಪೆ: ಬಿಜೆಪಿ ಬೆಂಬಲಿತ ತೆಂಕನಿಡಿಯೂರು ಗ್ರಾ.ಪಂ ಅಧ್ಯಕ್ಷೆ ಕಾಂಗ್ರೆಸ್ ಸೇರ್ಪಡೆ – vishwanews24

ಮಲ್ಪೆ: ಬಿಜೆಪಿ ಬೆಂಬಲಿತ ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷೆ ಕಾಂಗ್ರೆಸ್ ಸೇರ್ಪಡೆ

ಮಲ್ಪೆ: ತೆಂಕನಿಡಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಧ್ಯಕ್ಷೆ ಶೋಭಾ ಅವರು ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಶೋಭಾ ಅವರಿಗೆ ಕಾಂಗ್ರೆಸ್ ಪಕ್ಷದ ಧ್ವಜವನ್ನು ನೀಡುವುದರ ಮೂಲಕ ಪಕ್ಷಕ್ಕೆ ಅಧಿಕೃತವಾಗಿ ಸ್ವಾಗತಿಸಿದರು.

26 ಸದಸ್ಯ ಬಲದ ತೆಂಕನಿಡಿಯೂರು ಗ್ರಾಮ ಪಂಚಾಯತ್ ನಲ್ಲಿ ಈ ಹಿಂದೆ ಬಿಜೆಪಿ ಬೆಂಬಲಿತ 14 ಸದಸ್ಯರಿದ್ದು, ಕಾಂಗ್ರೆಸ್ ಬೆಂಬಲಿತ 12 ಮಂದಿ ಸದಸ್ಯರು ಆಯ್ಕೆಯಾಗಿದ್ದು, ಎಸ್ ಟಿ ಮೀಸಲಾತಿಯಲ್ಲಿ ಶೋಭಾ ಅವರು ಬಿಜೆಪಿ ಬೆಂಬಲದೊಂದಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಪ್ರಸ್ತುತ ಕಾಂಗ್ರೆಸ್ ಸೇರ್ಪಡೆಗೊಂಡಿರುವುದರಿಂದ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ 13 ಸದಸ್ಯರೊಂದಿಗೆ ಸಮಬಲ ಸಾಧಿಸಿದ್ದು, ಪಂಚಾಯತ್ ಆಡಳಿತ ಕಾಂಗ್ರೆಸ್ ತೆಕ್ಕೆಗೆ ಬಂದಂತಾಗಿದೆ.

ಪಕ್ಷ ಸೇರ್ಪಡೆ ವೇಳೆ ಕೆಪಿಸಿಸಿ ವಕ್ತಾರಾದ ವೆರೋನಿಕಾ ಕರ್ನೆಲಿಯೋ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೆರಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್, ನಾಯಕರಾದ ಗಣೇಶ್ ನೆರ್ಗಿ, ಗೋಪಾಲಕೃಷ್ಣ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ಪಂಚಾಯತ್ ಸದಸ್ಯರಾದ ಸತೀಶ್ ನಾಯಕ್, ಸುರೇಶ್ ನಾಯಕ್, ಪ್ರಥ್ವಿರಾಜ್ ಶೆಟ್ಟಿ, ಶರತ್ ಶೆಟ್ಟಿ, ವೆಂಕಟೇಶ್ ಕುಲಾಲ್, ರವಿರಾಜ್ ಲಕ್ಷ್ಮೀನಗರ, ಮೀನಾಪಿಂಟೊ, ಸಿಂಪ್ರಿಯಾ ರೊಡ್ರಿಗಸ್, ಮಂಜುನಾಥ್ ಆಚಾರ್ಯ, ಅನುಷಾ ಆಚಾರ್ಯ, ವಿನಯ ಆಚಾರ್ಯ ಉಪಸ್ಥಿತರಿದ್ದರು.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

5 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

5 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

5 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

5 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

6 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

7 hours ago