Featured

ಮಲ್ಪೆ ಬೀಚ್ ನಲ್ಲಿ ತೊರಕೆ (ಸ್ಟಿಂಗ್ ರೇ) ಮೀನು ಗಳ ಹಾವಳಿ ; ಸಮುದ್ರಕ್ಕೆ ಇಳಿಯುವ ಮುನ್ನ ಎಚ್ಚರ..!!

ಉಡುಪಿ : ಉಡುಪಿ ಪ್ರಸಿದ್ದ ಪ್ರವಾಸಿ ತಾಣ ಮಲ್ಪೆ ಬೀಚ್ ನಲ್ಲಿ ಕಳೆದ ಎರಡು ದಿನಗಳಿಂದ ಬೀಚಿನಲ್ಲಿ ಸಮುದ್ರಕ್ಕೆ ಇಳಿದವರಿಗೆ ತೊರಕೆ ಮೀನು ಅಥವಾ ಸ್ಟಿಂಗ್ ರೇ ಇಂಜೆಕ್ಷನ್ ರುಚಿ ತೋರಿಸಿದೆ.

ಸಾಮಾನ್ಯವಾಗಿ ಆಳ ಸಮುದ್ರದಲ್ಲಿ ಕಂಡು ಬರುವ ಈ ಮೀನು ಈ ಅವಧಿಗೆ ಸಂತಾನೋತ್ಪತ್ತಿಗಾಗಿ ಕಡಲ ತಡೆಗೆ ಬರುತ್ತದೆ. ಅದರಂತೆ ಈ ವರ್ಷವೂ ಸಾಕಷ್ಟು ಸಂಖ್ಯೆಯಲ್ಲಿ ಮೀನುಗಳು ತೀರ ಸೇರಿವೆ .ಇನ್ನು ಒಂದು ವಾರದವರೆಗೆ ಈ ಮೀನುಗಳು ಸಮುದ್ರ ಕಿನಾರೆಯಲ್ಲಿ ಇರುತ್ತವೆ ಎಂದು ಹೇಳಲಾಗಿದೆ .

ಸಂತಾನೋತ್ಪತ್ತಿಗಾಗಿ ಕಡಲ ಕಿನಾರೆಗೆ ಆಗಮಿಸುವ ಸಂದರ್ಭದಲ್ಲಿ ಈ ತೊರಕೆ ಮೀನುಗಳು ತೀರಾ ಆಕ್ರಮಣಕಾರಿಯಾಗಿದ್ದು, ಸಮುದ್ರದಲ್ಲಿ ಈಜಲು ನೀರಿಗಿಳಿಯುವ ಪ್ರವಾಸಿಗರಿಗೆ ಇದರ ಚೂಪಾದ ಬಾಲದ ಇಂಜೆಕ್ಷನ್ ಭಾಗ್ಯ ಲಭಿಸಿದೆ.

ಕಳೆದ ಶುಕ್ರವಾರದಿಂದ ಮಲ್ಪೆ ಬೀಚ್ ನಲ್ಲಿ ಈ ತೊರಕೆ ಮೀನಿನ ದಾಳಿಯ ಸುಮಾರು 12 ಪ್ರಕರಣಗಳು ವರದಿಯಾಗಿದೆ. ದಾಳಿಗೆ ಒಳಗಾದ ಪ್ರವಾಸಿಗರು ಇಲ್ಲಿರುವ ಲೈಫ್ ಗಾರ್ಡ್ ಗಳ ಬಳಿ ಪ್ರಥಮ ಚಿಕಿತ್ಸೆ ಪಡೆದಿದ್ದಾರೆ. ಹೆಚ್ಚು ಗಾಯಗೊಂಡವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಮಲ್ಪೆ ಬೀಚ್ ನಲ್ಲಿ ತೊರಕೆ ಪ್ರತಾಪ ಕಳೆದ 7 ರಿಂದ 8 ವರ್ಷಗಳಿಂದ ನಡೆಯುತ್ತಿದೆ. ಮಳೆಗಾಲ ಕಳೆಯುತ್ತಿದಂತೆ ಸಮುದ್ರ ನೀರು ತಂಪಾಗುತ್ತದೆ. ಈ ಹಿನ್ನಲೆಯಲ್ಲಿ ಸಮುದ್ರ ತೀರಕ್ಕೆ ಮೊಟ್ಟೆ ಇಡಲು ತೊರೆಕೆಗಳು ಆಗಮಿಸುತ್ತವೆ. ಈ ಹಾವಳಿ ಇನ್ನೂ 10 ದಿನ ಮುಂದುವರೆಯುವ ಸಾಧ್ಯತೆ ಇದ್ದು. ಪ್ರವಾಸಿಗರು ಮಲ್ಪೆ ಬೀಚ್ ನಲ್ಲಿ ಸಮುದ್ರಕ್ಕೆ ಇಳಿಯುವ ಮೊದಲು ಯೋಚನೆ ಮಾಡಬೇಕಾದ ಪರಿಸ್ಥಿತಿ ಇದೆ.

ಚೂಪಾದ ಬಾಲದಿಂದ ದಾಳಿ :ತೊರಕೆ ಮೀನು ಬಾಲದ ಮುಳ್ಳಿನಿಂದ ಚುಚ್ಚಿದಾಗ ವಿಪರೀತ ರಕ್ತ ಸ್ರಾವವಾಗುತ್ತದೆ ಹಾಗೂ ತುಂಬಾ ನೋವು ಕೂಡಾ ಉಂಟಾಗುತ್ತದೆ. ತೊರಕೆ ಮೀನಿನ ಮುಳ್ಳು ನಂಜಿನ ಗುಣವುಳ್ಳದ್ದರಿಂದ ಮೀನಿನ ಮುಳ್ಳು ಚುಚ್ಚಿದ ಬಳಿಕ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು. ಕಣ್ಣಿಗೆ ಕಾಣಿಸುವುದಿಲ್ಲ ಎರಡು ವರ್ಷಗಳ ಹಿಂದೆ ಇದೇ ರೀತಿಯಲ್ಲಿ ತೊರಕೆ ಮೀನುಗಳು ಪ್ರವಾಸಿಗರಿಗೆ ಮುಳ್ಳು ಚುಚ್ಚಿ ಗಾಯಗೊಳಿಸಿದ್ದವು. ಈ ತೊರಕೆ ಮೀನುಗಳ ಬಣ್ಣ ಹಾಗೂ ಮರಳಿನ ಬಣ್ಣ ಒಂದೇ ರೀತಿ ಗೋಚರಿಸುವ ಕಾರಣ ನೀರಿಗಿಳಿದು ಆಟವಾಡುವ ಪ್ರವಾಸಿಗರು ಕಾಲಿನಡಿಯಲ್ಲಿ ಸಂಚರಿಸುವ ತೊರಕೆ ಮೀನಿನ ಅರಿವಿಲ್ಲದೆ ಮೆಟ್ಟಿ ಮುಳ್ಳನ್ನು ಚುಚ್ಚಿಸಿಕೊಳ್ಳುತಿದ್ದಾರೆ.  ತೊರಕೆ ಮೀನಿನ ಮುಳ್ಳು ಚುಚ್ಚಿದ ಬಳಿಕ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.ಈ ಹಿನ್ನೆಲೆಯಲ್ಲಿ ಕರಾವಳಿಯ ಕಡಲ ತಡಿಗೆ ಬರುವ ಪ್ರವಾಸಿಗರು ಮುಂಜಾಗ್ರತೆ ವಹಿಸಬೇಕಾಗಿದೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

6 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

7 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

7 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

7 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

11 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

12 hours ago