Featured

ಮಲ್ಪೆ ಬೀಚ್ ನಲ್ಲಿ ಮತ್ತೆ ಆರಂಭಗೊಂಡ ಫ್ಲೋಟಿಂಗ್ ಬ್ರಿಡ್ಜ್ : ಪ್ರವಾಸಿಗರಿಂದ ಉತ್ತಮ ಸ್ಪಂದನೆ – vishwanews24

ಮಲ್ಪೆ ಬೀಚ್ ನಲ್ಲಿ ಮತ್ತೆ ಫ್ಲೋಟಿಂಗ್ ಬ್ರಿಡ್ಜ್ ಆರಂಭ; ಪ್ರವಾಸಿಗರಿಂದ ಉತ್ತಮ ಸ್ಪಂದನೆ

ಮಲ್ಪೆ: ಪ್ರವಾಸಿಗರ ಆಕರ್ಷಣೆಯಲ್ಲೊಂದಾದ ಮಲ್ಪೆಯ ಫ್ಲೋಟಿಂಗ್ ಬ್ರಿಡ್ಜ್ ನ. 6ರಿಂದ ಪ್ರವಾಸಿಗರಿಗೆ ತೆರೆಯಲಾಗಿದೆ. ಇದಕ್ಕೆ ಪ್ರವಾಸಿಗರಿಂದ ಉತ್ತಮ ಸ್ಪಂದನೆ ದೊರೆತಿದೆ.

ಸಂಜೆ ಹೊತ್ತಿಗೆ ಮಲ್ಪೆ ಬೀಚ್‌ಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರತಿದಿನ 4ರಿಂದ 5 ಸಾವಿರ ಪ್ರವಾಸಿಗರು ಬೀಚ್‌ಗೆ ಬರುತ್ತಿದ್ದು, ವಾರಾಂತ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.

ಸುಮಾರು 130 ಮೀ. ಉದ್ದ, 3 ಮೀ. ಅಗಲವಿರುವ ಈ ಫ್ಲೋಟಿಂಗ್ ಬ್ರಿಡ್ಜ್ ನಲ್ಲಿ ಏಕಕಾಲಕ್ಕೆ 200ಕ್ಕೂ ಮಿಕ್ಕಿ ಪ್ರವಾಸಿಗರು ತುದಿಯಲ್ಲಿ ನಿಂತು ಸೂರ್ಯಾಸ್ತವನ್ನು ನೋಡಬಹುದು. ಸೇತುವೆಯ ಎರಡೂ ಬದಿಯಲ್ಲಿ ಪ್ರವಾಸಿಗರ ರಕ್ಷಣೆಗೆ ರೈಲಿಂಗ್ಸ್ ಅಳವಡಿಸಲಾಗಿದೆ.

ಸಮುದ್ರ ಭಾಗದಲ್ಲಿರುವ ತುದಿಯಲ್ಲಿ ಪ್ಲಾಟ್‌ಫಾರ್ಮ್ 15 ಅಡಿ ಉದ್ದ, 8 ಅಡಿ ಅಗಲವಿದೆ. ಸಮುದ್ರಕ್ಕೆ ಬರುವ ಪ್ರವಾಸಿಗರ ರಕ್ಷಣೆಗಾಗಿ 13 ಮಂದಿ ಜೀವ ರಕ್ಷಕರು, ಲೈಪ್ ಜಾಕೆಟ್, ಲೈಫ್‌ಬಾಯ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಈ ಫ್ಲೋಟಿಂಗ್ ಬ್ರಿಡ್ಜ್ ನಲ್ಲಿ 15 ನಿಮಿಷಗಳ ಅವಧಿಗೆ ಮೋಜಿಗೆ 150 ರೂ. ಶುಲ್ಕ ನಿಗದಿಪಡಿಸಲಾಗಿದೆ. ಜೊತೆಗೆ ಫ್ಲೋಟಿಂಗ್ ಬ್ರಿಡ್ಜ್ ನಲ್ಲಿ ತೆರಳುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಲೈಫ್ ಜಾಕೆಟ್ ತೊಡಬೇಕಾಗಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

1 hour ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

2 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

2 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

2 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago