Featured

ಮಲ್ಪೆ: ಬೀಚ್ ಹೊಟೇಲ್‌ಗಳಿಗೆ ಪೌರಾಯುಕ್ತರಿಂದ ದಾಳಿ ; ಎಚ್ಚರಿಕೆ – vishwanews24

ಮಲ್ಪೆ: ಬೀಚ್ ಹೊಟೇಲ್‌ಗಳಿಗೆ ಪೌರಾಯುಕ್ತರಿಂದ ದಾಳಿ –  ಎಚ್ಚರಿಕೆ

ಮಲ್ಪೆ : ಇಲ್ಲಿನ ಬೀಚ್ ಆಸುಪಾಸಿನಲ್ಲಿ, ರಸ್ತೆ ಬದಿಗಳಲ್ಲಿ ಮಾರಾಟ ಮಾಡುವ ಮೀನಿನ ಆಹಾರ ಖಾದ್ಯಗಳಿಗೆ ಕೃತಕ ಬಣ್ಣ ಹಾಗೂ ರುಚಿ ಬರುವ ರಾಸಾಯನಿಕ ಸೇರಿಸಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ದೂರಿನ ಹಿನ್ನೆಲೆಯಲ್ಲಿ ಉಡುಪಿ ನಗರಸಭಾ ಪೌರಾಯುಕ್ತರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಇಂದು ಮಲ್ಪೆ ಬೀಚ್ ಬಳಿ ಇರುವ ಹೊಟೇಲ್‌ ಗಳಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿತು.

ಮಲ್ಪೆ ಬೀಚ್ ಸುತ್ತಮುತ್ತಲು ಇಪ್ಪತ್ತಕ್ಕೂ ಅಧಿಕ ಮೀನಿನ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ಅಂಗಡಿಗಳಿದ್ದು, ಇಲ್ಲಿ ಪ್ರತಿದಿನ ಸಾವಿರಾರು ಪ್ರವಾಸಿಗರು ಆಗಮಿಸಿ ಇವುಗಳನ್ನು ತಿನ್ನುತ್ತಾರೆ. ರಸ್ತೆಯಂಚಿನಲ್ಲಿ ಮೀನಿನ ಫ್ರೈ, ಮಸಾಲ ಫ್ರೈ, ಚಿಕನ್ ಕಬಾಬ್, ಚೈನಿಸ್ ಆಹಾರಗಳ ಮಾರಾಟ ಮಾಡುವ ಹೊಟೇಲ್‌ಗಳಿವೆ. ಇಲ್ಲಿನ ಹೆಚ್ಚಿನ ಹೊಟೇಲ್‌ಗಳಲ್ಲಿ ಆಹಾರ ಪದಾರ್ಥಗಳಿಗೆ ಕೃತಕ ಬಣ್ಣ, ಅತೀಯಾದ ರುಚಿ ಬರುವ ರಾಸಾಯನಿಕ ಬೆರೆಸಿ ತಯಾರು ಮಾಡುತ್ತಾರೆ ಎಂದು ಬಹಳಷ್ಟು ಪ್ರವಾಸಿಗರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿ, ತಕ್ಷಣ ಬೀಚ್ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಹಾಗೂ ಉಡುಪಿ ನಗರಸಭಾ ಪೌರಾಯುಕ್ತರಿಗೆ ದಾಳಿ ನಡೆಸಿ ಪರಿಶೀಲಿಸಲು ನಿರ್ದೇಶನ ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೌರಾಯುಕ್ತ ರಾಯಪ್ಪ ಅವರ ನೇತೃತ್ವದಲ್ಲಿ ನಗರಸಭೆಯ ಅಧಿಕಾರಿಗಳು ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ದಾಳಿ ನಡೆಸಿದ್ದಾರೆ.

ದಾಳಿ ಸಂದರ್ಭದಲ್ಲಿ ಹೆಚ್ಚಿನ ಹೊಟೇಲ್‌ಗಳಲ್ಲಿ ಮಾನವನ ಜೀವಕ್ಕೆ ಹಾನಿಕಾರಕವಾಗುವ ಕೃತಕ ಬಣ್ಣ ಹಾಗೂ ಅಜಿನಮೊಟೊ ಬಳಸುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಹೊಟೇಲ್ ಮಾಲಕರಿಗೆ ಎಚ್ಚರಿಕೆ ನೀಡಿರುವ ಪೌರಾಯುಕ್ತರು ಇನ್ನು ಮುಂದಿನ ದಿನಗಳಲ್ಲಿ ಆಹಾರ ಪದಾರ್ಥಗಳಿಗೆ ವಿಷಯುಕ್ತ ಬಣ್ಣ, ಟೆಸ್ಟೀ ಪೌಡರ್ ಬಳಕೆ ಮಾಡದಂತೆ ನಿರ್ದೇಶನ ನೀಡಿದ್ದಾರೆ.

ಇನ್ನು ಮುಂದೆ ಪ್ರತಿನಿತ್ಯ ಇದರ ಬಗ್ಗೆ ನಿಗಾ ವಹಿಸುತ್ತೇವೆ. ಮತ್ತೊಮ್ಮೆ ಈ ರೀತಿ ಕಂಡುಬಂದರೆ ಹೊಟೇಲ್‌ಗಳನ್ನೇ ಮುಚ್ಚಿ ಕಾನೂನು ರೀತ್ಯಾ ಕ್ರಮಕೈಗೊಳ್ಳುವುದಾಗಿ ಎಲ್ಲರಿಗೂ ಎಚ್ಚರಿಕೆ ನೀಡಿದ್ದಾರೆ. ಅದೇ ರೀತಿ ಏಕಬಳಕೆಯ ಪ್ಲಾಸ್ಟಿಕ್ ಉಪಯೋಗಿಸದಂತೆ ಖಡಕ್ ವಾರ್ನಿಂಗ್ ಸಹ ನೀಡಿ ಬಂದಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

11 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

13 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

13 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

13 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

13 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago