Featured

ಮಲ್ಪೆ: ಬೀಚ್ ಹೊಟೇಲ್‌ಗಳಿಗೆ ಪೌರಾಯುಕ್ತರಿಂದ ದಾಳಿ ; ಎಚ್ಚರಿಕೆ – vishwanews24

ಮಲ್ಪೆ: ಬೀಚ್ ಹೊಟೇಲ್‌ಗಳಿಗೆ ಪೌರಾಯುಕ್ತರಿಂದ ದಾಳಿ –  ಎಚ್ಚರಿಕೆ

ಮಲ್ಪೆ : ಇಲ್ಲಿನ ಬೀಚ್ ಆಸುಪಾಸಿನಲ್ಲಿ, ರಸ್ತೆ ಬದಿಗಳಲ್ಲಿ ಮಾರಾಟ ಮಾಡುವ ಮೀನಿನ ಆಹಾರ ಖಾದ್ಯಗಳಿಗೆ ಕೃತಕ ಬಣ್ಣ ಹಾಗೂ ರುಚಿ ಬರುವ ರಾಸಾಯನಿಕ ಸೇರಿಸಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ದೂರಿನ ಹಿನ್ನೆಲೆಯಲ್ಲಿ ಉಡುಪಿ ನಗರಸಭಾ ಪೌರಾಯುಕ್ತರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಇಂದು ಮಲ್ಪೆ ಬೀಚ್ ಬಳಿ ಇರುವ ಹೊಟೇಲ್‌ ಗಳಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿತು.

ಮಲ್ಪೆ ಬೀಚ್ ಸುತ್ತಮುತ್ತಲು ಇಪ್ಪತ್ತಕ್ಕೂ ಅಧಿಕ ಮೀನಿನ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ಅಂಗಡಿಗಳಿದ್ದು, ಇಲ್ಲಿ ಪ್ರತಿದಿನ ಸಾವಿರಾರು ಪ್ರವಾಸಿಗರು ಆಗಮಿಸಿ ಇವುಗಳನ್ನು ತಿನ್ನುತ್ತಾರೆ. ರಸ್ತೆಯಂಚಿನಲ್ಲಿ ಮೀನಿನ ಫ್ರೈ, ಮಸಾಲ ಫ್ರೈ, ಚಿಕನ್ ಕಬಾಬ್, ಚೈನಿಸ್ ಆಹಾರಗಳ ಮಾರಾಟ ಮಾಡುವ ಹೊಟೇಲ್‌ಗಳಿವೆ. ಇಲ್ಲಿನ ಹೆಚ್ಚಿನ ಹೊಟೇಲ್‌ಗಳಲ್ಲಿ ಆಹಾರ ಪದಾರ್ಥಗಳಿಗೆ ಕೃತಕ ಬಣ್ಣ, ಅತೀಯಾದ ರುಚಿ ಬರುವ ರಾಸಾಯನಿಕ ಬೆರೆಸಿ ತಯಾರು ಮಾಡುತ್ತಾರೆ ಎಂದು ಬಹಳಷ್ಟು ಪ್ರವಾಸಿಗರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿ, ತಕ್ಷಣ ಬೀಚ್ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಹಾಗೂ ಉಡುಪಿ ನಗರಸಭಾ ಪೌರಾಯುಕ್ತರಿಗೆ ದಾಳಿ ನಡೆಸಿ ಪರಿಶೀಲಿಸಲು ನಿರ್ದೇಶನ ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೌರಾಯುಕ್ತ ರಾಯಪ್ಪ ಅವರ ನೇತೃತ್ವದಲ್ಲಿ ನಗರಸಭೆಯ ಅಧಿಕಾರಿಗಳು ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ದಾಳಿ ನಡೆಸಿದ್ದಾರೆ.

ದಾಳಿ ಸಂದರ್ಭದಲ್ಲಿ ಹೆಚ್ಚಿನ ಹೊಟೇಲ್‌ಗಳಲ್ಲಿ ಮಾನವನ ಜೀವಕ್ಕೆ ಹಾನಿಕಾರಕವಾಗುವ ಕೃತಕ ಬಣ್ಣ ಹಾಗೂ ಅಜಿನಮೊಟೊ ಬಳಸುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಹೊಟೇಲ್ ಮಾಲಕರಿಗೆ ಎಚ್ಚರಿಕೆ ನೀಡಿರುವ ಪೌರಾಯುಕ್ತರು ಇನ್ನು ಮುಂದಿನ ದಿನಗಳಲ್ಲಿ ಆಹಾರ ಪದಾರ್ಥಗಳಿಗೆ ವಿಷಯುಕ್ತ ಬಣ್ಣ, ಟೆಸ್ಟೀ ಪೌಡರ್ ಬಳಕೆ ಮಾಡದಂತೆ ನಿರ್ದೇಶನ ನೀಡಿದ್ದಾರೆ.

ಇನ್ನು ಮುಂದೆ ಪ್ರತಿನಿತ್ಯ ಇದರ ಬಗ್ಗೆ ನಿಗಾ ವಹಿಸುತ್ತೇವೆ. ಮತ್ತೊಮ್ಮೆ ಈ ರೀತಿ ಕಂಡುಬಂದರೆ ಹೊಟೇಲ್‌ಗಳನ್ನೇ ಮುಚ್ಚಿ ಕಾನೂನು ರೀತ್ಯಾ ಕ್ರಮಕೈಗೊಳ್ಳುವುದಾಗಿ ಎಲ್ಲರಿಗೂ ಎಚ್ಚರಿಕೆ ನೀಡಿದ್ದಾರೆ. ಅದೇ ರೀತಿ ಏಕಬಳಕೆಯ ಪ್ಲಾಸ್ಟಿಕ್ ಉಪಯೋಗಿಸದಂತೆ ಖಡಕ್ ವಾರ್ನಿಂಗ್ ಸಹ ನೀಡಿ ಬಂದಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago