ಉಡುಪಿ : ಮಲ್ಪೆಯಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿದ್ದ 7 ಜನ ಮೀನುಗಾರರು ಸುರಕ್ಷಿತವಾಗಿದ್ದಾರೆ, ಆದರೇ ಕಷ್ಟದಲ್ಲಿದ್ದಾರೆ, ಉತ್ತರ ಭಾಗದಲ್ಲಿದ್ದಾರೆ ಎಂದು ಬೊಬ್ಬರ್ಯ ದೈವ ನುಡಿ ಕೊಟ್ಟಿದೆ.
ಡಿಸೆಂಬರ್ 13 ರಿಂದ ದಾಮೋದರ್, ರಮೇಶ್, ಹರೀಶ್, ಲಕ್ಷ್ಮಣ್, ರವಿ, ಸತೀಶ್, ಚಂದ್ರಶೇಖರ್ ಎಂಬವರು ನಾಪತ್ತೆಯಾಗಿದ್ದು, ಇದುವರೆಗೂ ಪತ್ತೆಯಾಗದ ಹಿನ್ನೆಲೆಯಲ್ಲಿ ಮೀನುಗಾರರ ಕುಟುಂಬಸ್ಥರು ಬೊಬ್ಬರ್ಯ ದೈವದ ಮೊರೆ ಹೋಗಿದ್ದಾರೆ.
ನಾಪತ್ತೆಯಾದ 7 ಮಂದಿ ಮೀನುಗಾರರು ಸುರಕ್ಷಿತವಾಗಿದ್ದಾರೆ, ಆದರೇ ಕಷ್ಟದಲ್ಲಿದ್ದಾರೆ ಎಂದು ಮೀನುಗಾರರ ಆರಾಧ್ಯ ಬೊಬ್ಬರ್ಯ ದೈವ ಅಭಯ ನೀಡಿದೆ. ಸರಕಾರವು ಮೀನುಗಾರರನ್ನು ಹುಡುಕುವ ಎಲ್ಲಾ ಪ್ರಯತ್ನಗಳು ಇದುವರೆಗೆ ಯಾವುದೇ ಫಲ ನೀಡದೇ ಇರುವುದರಿಂದ, ಬಡಾನಿಡಿಯೂರು 1 ಮತ್ತು 2ನೇ ಮೊಗವೀರ ಗ್ರಾಮಸಭೆಯ ಸಮಸ್ತ ಮೀನುಗಾರರು ಸ್ಥಳೀಯ ತೊಟ್ಟಂ ಬೊಬ್ಬರ್ಯ ದೈವಸ್ಥಾನದಲ್ಲಿ ದೈವ ದರ್ಶನವನ್ನು ಏರ್ಪಡಿಸಿದ್ದರು.
ಪೊಲೀಸರು, ಸೈನ್ಯದಿಂದ ಮಾತ್ರ ಅವರನ್ನು ಪತ್ತೆ ಹಚ್ಚಬಹುದು. ದಟ್ಟ ಪೊದೆಗಳ ಮಧ್ಯೆ ಕಣ್ಮರೆಯಾಗಿದ್ದಾರೆ. 6-7 ದಿನದೊಳಗೆ ಅವರ ಕುರುಹು ಪತ್ತೆಯಾಗುತ್ತದೆ. ಸರ್ಕಾರದ ಮಟ್ಟದಲ್ಲಿ ಈ ಕೆಲಸ ಆಗಬೇಕು ಎಂದು ದೈವ ಬೊಬ್ಬರ್ಯ ಪಾತ್ರಿ ನುಡಿ ಕೊಟ್ಟಿದ್ದಾರೆ.
ದೈವವು ನಾಪತ್ತೆಯಾದ ಮೀನುಗಾರರ ಕುಟುಂಬಕ್ಕೆ ದೈರ್ಯ ನೀಡಿ, ಬೆನ್ನ ಹಿಂದೆ ಕಾಯುತ್ತೇನೆ ಎಂದು ಅಭಯ ನೀಡಿತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…