Featured

ಮಲ್ಪೆ ಬೋಟ್ ನಾಪತ್ತೆ ಪ್ರಕರಣ :ಮೀನುಗಾರರು ಸುರಕ್ಷಿತರಾಗಿದ್ದಾರೆ : ಬೊಬ್ಬರ್ಯ ದೈವ ನುಡಿ..

ಉಡುಪಿ : ಮಲ್ಪೆಯಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿದ್ದ 7 ಜನ ಮೀನುಗಾರರು ಸುರಕ್ಷಿತವಾಗಿದ್ದಾರೆ, ಆದರೇ ಕಷ್ಟದಲ್ಲಿದ್ದಾರೆ,  ಉತ್ತರ ಭಾಗದಲ್ಲಿದ್ದಾರೆ ಎಂದು ಬೊಬ್ಬರ್ಯ ದೈವ ನುಡಿ ಕೊಟ್ಟಿದೆ.

ಡಿಸೆಂಬರ್ 13 ರಿಂದ ದಾಮೋದರ್, ರಮೇಶ್, ಹರೀಶ್, ಲಕ್ಷ್ಮಣ್, ರವಿ, ಸತೀಶ್, ಚಂದ್ರಶೇಖರ್ ಎಂಬವರು ನಾಪತ್ತೆಯಾಗಿದ್ದು, ಇದುವರೆಗೂ ಪತ್ತೆಯಾಗದ ಹಿನ್ನೆಲೆಯಲ್ಲಿ ಮೀನುಗಾರರ ಕುಟುಂಬಸ್ಥರು ಬೊಬ್ಬರ್ಯ ದೈವದ ಮೊರೆ ಹೋಗಿದ್ದಾರೆ.

ನಾಪತ್ತೆಯಾದ 7 ಮಂದಿ ಮೀನುಗಾರರು ಸುರಕ್ಷಿತವಾಗಿದ್ದಾರೆ, ಆದರೇ ಕಷ್ಟದಲ್ಲಿದ್ದಾರೆ ಎಂದು ಮೀನುಗಾರರ ಆರಾಧ್ಯ ಬೊಬ್ಬರ್ಯ ದೈವ ಅಭಯ ನೀಡಿದೆ. ಸರಕಾರವು ಮೀನುಗಾರರನ್ನು ಹುಡುಕುವ ಎಲ್ಲಾ ಪ್ರಯತ್ನಗಳು ಇದುವರೆಗೆ ಯಾವುದೇ ಫಲ ನೀಡದೇ ಇರುವುದರಿಂದ, ಬಡಾನಿಡಿಯೂರು 1 ಮತ್ತು 2ನೇ ಮೊಗವೀರ ಗ್ರಾಮಸಭೆಯ ಸಮಸ್ತ ಮೀನುಗಾರರು ಸ್ಥಳೀಯ ತೊಟ್ಟಂ ಬೊಬ್ಬರ್ಯ ದೈವಸ್ಥಾನದಲ್ಲಿ ದೈವ ದರ್ಶನವನ್ನು ಏರ್ಪಡಿಸಿದ್ದರು.

ಪೊಲೀಸರು, ಸೈನ್ಯದಿಂದ ಮಾತ್ರ ಅವರನ್ನು ಪತ್ತೆ ಹಚ್ಚಬಹುದು. ದಟ್ಟ ಪೊದೆಗಳ ಮಧ್ಯೆ ಕಣ್ಮರೆಯಾಗಿದ್ದಾರೆ. 6-7 ದಿನದೊಳಗೆ ಅವರ ಕುರುಹು ಪತ್ತೆಯಾಗುತ್ತದೆ. ಸರ್ಕಾರದ ಮಟ್ಟದಲ್ಲಿ ಈ ಕೆಲಸ ಆಗಬೇಕು ಎಂದು ದೈವ ಬೊಬ್ಬರ್ಯ ಪಾತ್ರಿ ನುಡಿ ಕೊಟ್ಟಿದ್ದಾರೆ.

ದೈವವು ನಾಪತ್ತೆಯಾದ ಮೀನುಗಾರರ ಕುಟುಂಬಕ್ಕೆ ದೈರ್ಯ ನೀಡಿ, ಬೆನ್ನ ಹಿಂದೆ ಕಾಯುತ್ತೇನೆ ಎಂದು ಅಭಯ ನೀಡಿತು.

 

Vishwa News 24

Recent Posts

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

1 minute ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

2 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

3 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

3 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

3 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

3 hours ago