ಉಡುಪಿ: ನಾಪತ್ತೆ ಮೀನುಗಾರರ ಸುಳಿವು ಸಿಗದೇ ಇರುವುದರಿಂದ ಸೋಮವಾರ ಶಾಸಕರಾದ ಕೆ ರಘುಪತಿ ಭಟ್ ರವರ ನೇತೃತ್ವದಲ್ಲಿ ಮೀನುಗಾರರ ಕುಟುಂಬದ ಜೊತೆಗೆ ಪರಿಶೀಲನೆ ನಡೆಸಲು ಸಮುದ್ರಕ್ಕೆ ತೆರಳಿದ್ದಾರೆ.
ಮೀನುಗಾರರು ನಾಪತ್ತೆಯಾದ ಬಗ್ಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮಾನ್ ಅವರನ್ನು ಭೇಟಿ ನೀಡಿ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಶಾಸಕ ರಘುಪತಿ ಭಟ್ ಅವರು ಮಾತುಕತೆ ನಡೆಸಿದ್ದರು. ಬಳಿಕ ಸ್ವತಃ ನಿರ್ಮಲಾ ಸೀತಾರಾಮಾನ್ ಅವರೇ ಉಡುಪಿಗೆ ಆಗಮಿಸಿ ನಾಪತ್ತೆಯಾದ ಮೀನುಗಾರರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು ಮತ್ತು ಕೇಂದ್ರ ಸರಕಾರ ಮತ್ತಷ್ಟು ಪತ್ತೆ ಕಾರ್ಯಕ್ಕೆ ನೆರವು ನೀಡುವುದಾಗಿ ಭರವಸೆ ನೀಡಿದ್ದರು.
ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಸಚಿವರಿಗೆ ಮನವಿ ಮಾಡಿದ್ದು, ನಮ್ಮನ್ನು ಕೂಡ ಬೋಟ್ ಮೂಲಕ ಸಮುದ್ರಕ್ಕೆ ಹೋಗುವಂತೆ ಅವಕಾಶ ನೀಡಬೇಕು ಮತ್ತು ನಾಪತ್ತೆಯಾದ ಸ್ಥಳವನ್ನು ನಾವು ಕೂಡ ವೀಕ್ಷಿಸಬೇಕು ಎಂದ ಕೇಳಿಕೊಂಡಿದ್ದರು. ಅದೇ ರೀತಿ ಕುಟುಂಬಸ್ಥರ ಮನವಿಯ ಮೇರೆಗೆ ಶಾಸಕರಾದ ಕೆ ರಘುಪತಿ ಭಟ್ ಅವರ ನೇತೃತ್ವದಲ್ಲಿ ಸೋಮವಾರ ಮುಂಜಾನೆ 4 ಗಂಟೆಗೆ ಭಾರತೀಯ ಭೂಸೇನೆಯ ಅಧಿಕಾರಿಗಳ ಜೊತೆಗೆ ಮತ್ತು ನಾಪತ್ತೆಯಾದ ಮೀನುಗಾರರ ಕುಟುಂಬದ ಜೊತೆಗೆ ಪರಿಶೀಲನೆಗೆ ತೆರಳಿದ್ದಾರೆ.
ಮಲ್ಪೆ ಬಂದರಿನಿಂದ ಮೀನುಗಾರಿಕೆಗೆಂದು ತೆರಳಿ ಕಣ್ಮರೆಯಾಗಿ ನಾಲ್ಕು ತಿಂಗಳು ಕಳೆದರೂ ಸುವರ್ಣ ತ್ರಿಭುಜ ಬೋಟ್ ಹಾಗೂ ಏಳು ಮೀನುಗಾರರು ಇನ್ನು ಪತ್ತೆಯಾಗಿಲ್ಲ.
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…
ಉಡುಪಿ: ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…