ಉಡುಪಿ: ನಾಪತ್ತೆ ಮೀನುಗಾರರ ಸುಳಿವು ಸಿಗದೇ ಇರುವುದರಿಂದ ಸೋಮವಾರ ಶಾಸಕರಾದ ಕೆ ರಘುಪತಿ ಭಟ್ ರವರ ನೇತೃತ್ವದಲ್ಲಿ ಮೀನುಗಾರರ ಕುಟುಂಬದ ಜೊತೆಗೆ ಪರಿಶೀಲನೆ ನಡೆಸಲು ಸಮುದ್ರಕ್ಕೆ ತೆರಳಿದ್ದಾರೆ.
ಮೀನುಗಾರರು ನಾಪತ್ತೆಯಾದ ಬಗ್ಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮಾನ್ ಅವರನ್ನು ಭೇಟಿ ನೀಡಿ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಶಾಸಕ ರಘುಪತಿ ಭಟ್ ಅವರು ಮಾತುಕತೆ ನಡೆಸಿದ್ದರು. ಬಳಿಕ ಸ್ವತಃ ನಿರ್ಮಲಾ ಸೀತಾರಾಮಾನ್ ಅವರೇ ಉಡುಪಿಗೆ ಆಗಮಿಸಿ ನಾಪತ್ತೆಯಾದ ಮೀನುಗಾರರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು ಮತ್ತು ಕೇಂದ್ರ ಸರಕಾರ ಮತ್ತಷ್ಟು ಪತ್ತೆ ಕಾರ್ಯಕ್ಕೆ ನೆರವು ನೀಡುವುದಾಗಿ ಭರವಸೆ ನೀಡಿದ್ದರು.
ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಸಚಿವರಿಗೆ ಮನವಿ ಮಾಡಿದ್ದು, ನಮ್ಮನ್ನು ಕೂಡ ಬೋಟ್ ಮೂಲಕ ಸಮುದ್ರಕ್ಕೆ ಹೋಗುವಂತೆ ಅವಕಾಶ ನೀಡಬೇಕು ಮತ್ತು ನಾಪತ್ತೆಯಾದ ಸ್ಥಳವನ್ನು ನಾವು ಕೂಡ ವೀಕ್ಷಿಸಬೇಕು ಎಂದ ಕೇಳಿಕೊಂಡಿದ್ದರು. ಅದೇ ರೀತಿ ಕುಟುಂಬಸ್ಥರ ಮನವಿಯ ಮೇರೆಗೆ ಶಾಸಕರಾದ ಕೆ ರಘುಪತಿ ಭಟ್ ಅವರ ನೇತೃತ್ವದಲ್ಲಿ ಸೋಮವಾರ ಮುಂಜಾನೆ 4 ಗಂಟೆಗೆ ಭಾರತೀಯ ಭೂಸೇನೆಯ ಅಧಿಕಾರಿಗಳ ಜೊತೆಗೆ ಮತ್ತು ನಾಪತ್ತೆಯಾದ ಮೀನುಗಾರರ ಕುಟುಂಬದ ಜೊತೆಗೆ ಪರಿಶೀಲನೆಗೆ ತೆರಳಿದ್ದಾರೆ.
ಮಲ್ಪೆ ಬಂದರಿನಿಂದ ಮೀನುಗಾರಿಕೆಗೆಂದು ತೆರಳಿ ಕಣ್ಮರೆಯಾಗಿ ನಾಲ್ಕು ತಿಂಗಳು ಕಳೆದರೂ ಸುವರ್ಣ ತ್ರಿಭುಜ ಬೋಟ್ ಹಾಗೂ ಏಳು ಮೀನುಗಾರರು ಇನ್ನು ಪತ್ತೆಯಾಗಿಲ್ಲ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…