ಉಡುಪಿ :‘ಸಮುದ್ರದಲ್ಲಿ ಮುಳುಗಿರುವ ಮೀನುಗಾರಿಕಾ ದೋಣಿ ಸುವರ್ಣ ತ್ರಿಭುಜದಲ್ಲಿದ್ದ ಮೀನುಗಾರರು ಬದುಕುಳಿಯುವ ಯಾವುದೇ ಅವಕಾಶಗಳೂ ಅಲ್ಲಿಲ್ಲ. ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಮುದ್ರದಲ್ಲಿ ಸುವರ್ಣ ತ್ರಿಭುಜ ದೋಣಿಯ ಅವಶೇಷಗಳು ಪತ್ತೆಯಾಗಿವೆ. ಕಾರ್ಯಾಚರಣೆಯನ್ನು ವೀಕ್ಷಿಸಲು ನನ್ನನ್ನು ಹಾಗೂ ಮೀನುಗಾರರ 9 ಮಂದಿ ಮುಖಂಡರನ್ನು ನೌಕಾಪಡೆಯ ಅಧಿಕಾರಿಗಳು ಕರೆದುಕೊಂಡು ಹೋಗಿದ್ದರು. ಸುಮಾರು 5 ದಿನ ಸಮುದ್ರದಲ್ಲಿ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ತಿಳಿಸಿದರು…
‘ಇಡೀ ಕಾರ್ಯಾಚರಣೆಯ ವಿಡಿಯೊ ಚಿತ್ರೀಕರಣ ಮಾಡಲಾಗಿದೆ. ದೋಣಿಯ ಅವಶೇಷಗಳನ್ನು ನಾವು ಸ್ವತಃ ನೋಡಿದ್ದೇವೆ. ಅವು ಕಂಡಲ್ಲೇ ನಾವಿದ್ದ ದೋಣಿಯನ್ನು ನಿಲ್ಲಿಸಿ ನೌಕಾಪಡೆಯ ಮುಳುಗು ತಜ್ಞರನ್ನು ಕೆಳಗಿಳಿಸಲಾಯಿತು. ಮೀನುಗಾರರ ಸಮ್ಮುಖದಲ್ಲೇ ಹುಡುಕಾಟ ಮಾಡಿದ್ದರಿಂದ ಕಾರ್ಯಾಚರಣೆ ಯಶಸ್ವಿಯಾಗಿದೆ. ಎಂದು ಹೇಳಿದರು.
ನೌಕಾಪಡೆಯ ನುರಿತ ಕ್ಯಾಪ್ಟನ್ಗಳ ಸಮ್ಮುಖದಲ್ಲಿ, ಶಬ್ದದ ಕಂಪನ ಆಧರಿಸಿದ ಸೋನಾರ್ ತಂತ್ರಜ್ಞಾನ ಬಳಸಿ ಶೋಧ ಕಾರ್ಯ ನಡೆಸಲಾಯಿತು. ಕೇವಲ ಬೋಟ್ ಅವಶೇಷಗಳು ಪತ್ತೆಯಾಗಿದೆ. ಆದರೆ ಈ ದೋಣಿಯಲ್ಲಿದ್ದ ಮೀನುಗಾರರು ಬದುಕಿ ಉಳಿದಿರುವ ಸಾಧ್ಯತೆ ಕಡಿಮೆ ಎಂದು ಹೇಳಿದರು.
ದೋಣಿಯಲ್ಲಿದ್ದ ಏಳೂ ಮೀನುಗಾರರ ಕುಟುಂಬಗಳಿಗೆ ದೊಡ್ಡ ರೀತಿಯ ಪರಿಹಾರ ನೀಡುವಂತೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಮತ್ತೊಮ್ಮೆ ಭೇಟಿ ಮಾಡಿ ಮನವಿ ಮಾಡಲಿದ್ದೇವೆ ಎಂದು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…