ಉಡುಪಿ :‘ಸಮುದ್ರದಲ್ಲಿ ಮುಳುಗಿರುವ ಮೀನುಗಾರಿಕಾ ದೋಣಿ ಸುವರ್ಣ ತ್ರಿಭುಜದಲ್ಲಿದ್ದ ಮೀನುಗಾರರು ಬದುಕುಳಿಯುವ ಯಾವುದೇ ಅವಕಾಶಗಳೂ ಅಲ್ಲಿಲ್ಲ. ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಮುದ್ರದಲ್ಲಿ ಸುವರ್ಣ ತ್ರಿಭುಜ ದೋಣಿಯ ಅವಶೇಷಗಳು ಪತ್ತೆಯಾಗಿವೆ. ಕಾರ್ಯಾಚರಣೆಯನ್ನು ವೀಕ್ಷಿಸಲು ನನ್ನನ್ನು ಹಾಗೂ ಮೀನುಗಾರರ 9 ಮಂದಿ ಮುಖಂಡರನ್ನು ನೌಕಾಪಡೆಯ ಅಧಿಕಾರಿಗಳು ಕರೆದುಕೊಂಡು ಹೋಗಿದ್ದರು. ಸುಮಾರು 5 ದಿನ ಸಮುದ್ರದಲ್ಲಿ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ತಿಳಿಸಿದರು…
‘ಇಡೀ ಕಾರ್ಯಾಚರಣೆಯ ವಿಡಿಯೊ ಚಿತ್ರೀಕರಣ ಮಾಡಲಾಗಿದೆ. ದೋಣಿಯ ಅವಶೇಷಗಳನ್ನು ನಾವು ಸ್ವತಃ ನೋಡಿದ್ದೇವೆ. ಅವು ಕಂಡಲ್ಲೇ ನಾವಿದ್ದ ದೋಣಿಯನ್ನು ನಿಲ್ಲಿಸಿ ನೌಕಾಪಡೆಯ ಮುಳುಗು ತಜ್ಞರನ್ನು ಕೆಳಗಿಳಿಸಲಾಯಿತು. ಮೀನುಗಾರರ ಸಮ್ಮುಖದಲ್ಲೇ ಹುಡುಕಾಟ ಮಾಡಿದ್ದರಿಂದ ಕಾರ್ಯಾಚರಣೆ ಯಶಸ್ವಿಯಾಗಿದೆ. ಎಂದು ಹೇಳಿದರು.
ನೌಕಾಪಡೆಯ ನುರಿತ ಕ್ಯಾಪ್ಟನ್ಗಳ ಸಮ್ಮುಖದಲ್ಲಿ, ಶಬ್ದದ ಕಂಪನ ಆಧರಿಸಿದ ಸೋನಾರ್ ತಂತ್ರಜ್ಞಾನ ಬಳಸಿ ಶೋಧ ಕಾರ್ಯ ನಡೆಸಲಾಯಿತು. ಕೇವಲ ಬೋಟ್ ಅವಶೇಷಗಳು ಪತ್ತೆಯಾಗಿದೆ. ಆದರೆ ಈ ದೋಣಿಯಲ್ಲಿದ್ದ ಮೀನುಗಾರರು ಬದುಕಿ ಉಳಿದಿರುವ ಸಾಧ್ಯತೆ ಕಡಿಮೆ ಎಂದು ಹೇಳಿದರು.
ದೋಣಿಯಲ್ಲಿದ್ದ ಏಳೂ ಮೀನುಗಾರರ ಕುಟುಂಬಗಳಿಗೆ ದೊಡ್ಡ ರೀತಿಯ ಪರಿಹಾರ ನೀಡುವಂತೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಮತ್ತೊಮ್ಮೆ ಭೇಟಿ ಮಾಡಿ ಮನವಿ ಮಾಡಲಿದ್ದೇವೆ ಎಂದು ಹೇಳಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…