ಉಡುಪಿ : ಮಲ್ಪೆಯಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿದ್ದ 7 ಜನ ಮೀನುಗಾರರು ಉತ್ತರ ಭಾಗದಲ್ಲಿದ್ದಾರೆ ಎಂದು ಬೊಬ್ಬರ್ಯ ದೈವ ನುಡಿ ಕೊಟ್ಟಿದೆ.
ಡಿಸೆಂಬರ್ 13 ರಿಂದ ದಾಮೋದರ್, ರಮೇಶ್, ಹರೀಶ್, ಲಕ್ಷ್ಮಣ್, ರವಿ, ಸತೀಶ್, ಚಂದ್ರಶೇಖರ್ ಎಂಬವರು ನಾಪತ್ತೆಯಾಗಿದ್ದು, ಇದುವರೆಗೂ ಪತ್ತೆಯಾಗದ ಹಿನ್ನೆಲೆಯಲ್ಲಿ ಮೀನುಗಾರರ ಕುಟುಂಬಸ್ಥರು ಬೊಬ್ಬರ್ಯ ದೈವದ ಮೊರೆ ಹೋಗಿದ್ದಾರೆ.
ನಾಪತ್ತೆಯಾದ 7 ಮಂದಿ ಮೀನುಗಾರರು ಸುರಕ್ಷಿತವಾಗಿದ್ದಾರೆ, ಆದರೇ ಕಷ್ಟದಲ್ಲಿದ್ದಾರೆ ಎಂದು ಮೀನುಗಾರರ ಆರಾಧ್ಯ ಬೊಬ್ಬರ್ಯ ದೈವ ಅಭಯ ನೀಡಿದೆ. ಸರಕಾರವು ಮೀನುಗಾರರನ್ನು ಹುಡುಕುವ ಎಲ್ಲಾ ಪ್ರಯತ್ನಗಳು ಇದುವರೆಗೆ ಯಾವುದೇ ಫಲ ನೀಡದೇ ಇರುವುದರಿಂದ, ಬಡಾನಿಡಿಯೂರು 1 ಮತ್ತು 2ನೇ ಮೊಗವೀರ ಗ್ರಾಮಸಭೆಯ ಸಮಸ್ತ ಮೀನುಗಾರರು ಸ್ಥಳೀಯ ತೊಟ್ಟಂ ಬೊಬ್ಬರ್ಯ ದೈವಸ್ಥಾನದಲ್ಲಿ ದೈವ ದರ್ಶನವನ್ನು ಏರ್ಪಡಿಸಿದ್ದರು.
ಪೊಲೀಸರು, ಸೈನ್ಯದಿಂದ ಮಾತ್ರ ಅವರನ್ನು ಪತ್ತೆ ಹಚ್ಚಬಹುದು. ದಟ್ಟ ಪೊದೆಗಳ ಮಧ್ಯೆ ಕಣ್ಮರೆಯಾಗಿದ್ದಾರೆ. 6-7 ದಿನದೊಳಗೆ ಅವರ ಕುರುಹು ಪತ್ತೆಯಾಗುತ್ತದೆ. ಸರ್ಕಾರದ ಮಟ್ಟದಲ್ಲಿ ಈ ಕೆಲಸ ಆಗಬೇಕು ಎಂದು ದೈವ ಬೊಬ್ಬರ್ಯ ಪಾತ್ರಿ ನುಡಿ ಕೊಟ್ಟಿದ್ದಾರೆ.
ದೈವವು ನಾಪತ್ತೆಯಾದ ಮೀನುಗಾರರ ಕುಟುಂಬಕ್ಕೆ ದೈರ್ಯ ನೀಡಿ, ಬೆನ್ನ ಹಿಂದೆ ಕಾಯುತ್ತೇನೆ ಎಂದು ಅಭಯ ನೀಡಿತು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…