ಉಡುಪಿ : ಮಲ್ಪೆಯಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿದ್ದ 7 ಜನ ಮೀನುಗಾರರು ಉತ್ತರ ಭಾಗದಲ್ಲಿದ್ದಾರೆ ಎಂದು ಬೊಬ್ಬರ್ಯ ದೈವ ನುಡಿ ಕೊಟ್ಟಿದೆ.
ಡಿಸೆಂಬರ್ 13 ರಿಂದ ದಾಮೋದರ್, ರಮೇಶ್, ಹರೀಶ್, ಲಕ್ಷ್ಮಣ್, ರವಿ, ಸತೀಶ್, ಚಂದ್ರಶೇಖರ್ ಎಂಬವರು ನಾಪತ್ತೆಯಾಗಿದ್ದು, ಇದುವರೆಗೂ ಪತ್ತೆಯಾಗದ ಹಿನ್ನೆಲೆಯಲ್ಲಿ ಮೀನುಗಾರರ ಕುಟುಂಬಸ್ಥರು ಬೊಬ್ಬರ್ಯ ದೈವದ ಮೊರೆ ಹೋಗಿದ್ದಾರೆ.
ನಾಪತ್ತೆಯಾದ 7 ಮಂದಿ ಮೀನುಗಾರರು ಸುರಕ್ಷಿತವಾಗಿದ್ದಾರೆ, ಆದರೇ ಕಷ್ಟದಲ್ಲಿದ್ದಾರೆ ಎಂದು ಮೀನುಗಾರರ ಆರಾಧ್ಯ ಬೊಬ್ಬರ್ಯ ದೈವ ಅಭಯ ನೀಡಿದೆ. ಸರಕಾರವು ಮೀನುಗಾರರನ್ನು ಹುಡುಕುವ ಎಲ್ಲಾ ಪ್ರಯತ್ನಗಳು ಇದುವರೆಗೆ ಯಾವುದೇ ಫಲ ನೀಡದೇ ಇರುವುದರಿಂದ, ಬಡಾನಿಡಿಯೂರು 1 ಮತ್ತು 2ನೇ ಮೊಗವೀರ ಗ್ರಾಮಸಭೆಯ ಸಮಸ್ತ ಮೀನುಗಾರರು ಸ್ಥಳೀಯ ತೊಟ್ಟಂ ಬೊಬ್ಬರ್ಯ ದೈವಸ್ಥಾನದಲ್ಲಿ ದೈವ ದರ್ಶನವನ್ನು ಏರ್ಪಡಿಸಿದ್ದರು.
ಪೊಲೀಸರು, ಸೈನ್ಯದಿಂದ ಮಾತ್ರ ಅವರನ್ನು ಪತ್ತೆ ಹಚ್ಚಬಹುದು. ದಟ್ಟ ಪೊದೆಗಳ ಮಧ್ಯೆ ಕಣ್ಮರೆಯಾಗಿದ್ದಾರೆ. 6-7 ದಿನದೊಳಗೆ ಅವರ ಕುರುಹು ಪತ್ತೆಯಾಗುತ್ತದೆ. ಸರ್ಕಾರದ ಮಟ್ಟದಲ್ಲಿ ಈ ಕೆಲಸ ಆಗಬೇಕು ಎಂದು ದೈವ ಬೊಬ್ಬರ್ಯ ಪಾತ್ರಿ ನುಡಿ ಕೊಟ್ಟಿದ್ದಾರೆ.
ದೈವವು ನಾಪತ್ತೆಯಾದ ಮೀನುಗಾರರ ಕುಟುಂಬಕ್ಕೆ ದೈರ್ಯ ನೀಡಿ, ಬೆನ್ನ ಹಿಂದೆ ಕಾಯುತ್ತೇನೆ ಎಂದು ಅಭಯ ನೀಡಿತು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…