ಪಡುಬಿದ್ರಿ : ಉಡುಪಿಯ ಮಲ್ಪೆಯಿಂದ ಮೀನುಗಾರಿಕೆಗಾಗಿ ಸಮುದ್ರಕ್ಕಿಳಿದ ಮೀನುಗಾರರು ನಾಪತ್ತೆಯಾಗಿ ತಿಂಗಳು ಕಳೆದರೂ ಸುಳಿವು ಲಭ್ಯವಾಗದೆ ಇರುವುದರಿಂದ ನಾಪತ್ತೆಯಾದವರು ಕ್ಷೇಮವಾಗಿ ಹಿಂತಿರುಗಲಿ ಎಂದು ಪಡುಬಿದ್ರಿ ಉದಯಾದ್ರಿ ಪ್ರಸನ್ನ ಪಾರ್ವತಿ ಬಾಲ ಗಣಪತಿ ದೇವಸ್ಥಾನದಲ್ಲಿ ಭಗವತಿ ಗ್ರೂಪಿನ ಪರವಾಗಿ ಪೂಜೆ ಮತ್ತು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು, ಈ ಸಂದರ್ಭದಲ್ಲಿ ಗ್ರೂಪಿನ ಎಲ್ಲಾ ಸದಸ್ಯರು ಉಪಸ್ಥಿತರಿದ್ದು ಪ್ರಾರ್ಥನೆ ಸಲ್ಲಿಸಿದರು..
ಮಲ್ಪೆ ಬಂದರಿನಿಂದ ಸುವರ್ಣ ತ್ರಿಭುಜ ಬೋಟ್ನಲ್ಲಿ ಆಳಸಮುದ್ರ ಟ್ರಾಲ್ ಬೋಟ್ ಮಾಲೀಕ ಚಂದ್ರಶೇಖರ್ ಕೋಟ್ಯಾನ್, ಮೀನುಗಾರರಾದ ದಾಮೋದರ್, ಲಕ್ಷ್ಮಣ, ಸತೀಶ್, ರವಿ, ಹರೀಶ್, ರಮೇಶ್ ಅವರು ಡಿ.13ರಂದು ರಾತ್ರಿ 11 ಗಂಟೆಗೆ ಮೀನುಗಾರಿಕೆಗೆ ತೆರಳಿದ್ದರು.
ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ ಸುವರ್ಣ ತ್ರಿಭುಜ ಬೋಟ್ ಸಹಿತ ಏಳು ಮಂದಿ ಮೀನುಗಾರರ ಕಣ್ಮರೆಯಾಗಿ ಒಂದು ತಿಂಗಳು ಪೂರ್ಣಗೊಂಡಿದೆ. ಆದರೆ ಈವರೆಗೂ ಮೀನುಗಾರರಿಗೆ ಸಂಬಂಧಿಸಿ ಯಾವುದೇ ಸುಳಿವು ಪತ್ತೆಯಾಗಿಲ್ಲ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…