ಪಡುಬಿದ್ರಿ : ಉಡುಪಿಯ ಮಲ್ಪೆಯಿಂದ ಮೀನುಗಾರಿಕೆಗಾಗಿ ಸಮುದ್ರಕ್ಕಿಳಿದ ಮೀನುಗಾರರು ನಾಪತ್ತೆಯಾಗಿ ತಿಂಗಳು ಕಳೆದರೂ ಸುಳಿವು ಲಭ್ಯವಾಗದೆ ಇರುವುದರಿಂದ ನಾಪತ್ತೆಯಾದವರು ಕ್ಷೇಮವಾಗಿ ಹಿಂತಿರುಗಲಿ ಎಂದು ಪಡುಬಿದ್ರಿ ಉದಯಾದ್ರಿ ಪ್ರಸನ್ನ ಪಾರ್ವತಿ ಬಾಲ ಗಣಪತಿ ದೇವಸ್ಥಾನದಲ್ಲಿ ಭಗವತಿ ಗ್ರೂಪಿನ ಪರವಾಗಿ ಪೂಜೆ ಮತ್ತು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು, ಈ ಸಂದರ್ಭದಲ್ಲಿ ಗ್ರೂಪಿನ ಎಲ್ಲಾ ಸದಸ್ಯರು ಉಪಸ್ಥಿತರಿದ್ದು ಪ್ರಾರ್ಥನೆ ಸಲ್ಲಿಸಿದರು..
ಮಲ್ಪೆ ಬಂದರಿನಿಂದ ಸುವರ್ಣ ತ್ರಿಭುಜ ಬೋಟ್ನಲ್ಲಿ ಆಳಸಮುದ್ರ ಟ್ರಾಲ್ ಬೋಟ್ ಮಾಲೀಕ ಚಂದ್ರಶೇಖರ್ ಕೋಟ್ಯಾನ್, ಮೀನುಗಾರರಾದ ದಾಮೋದರ್, ಲಕ್ಷ್ಮಣ, ಸತೀಶ್, ರವಿ, ಹರೀಶ್, ರಮೇಶ್ ಅವರು ಡಿ.13ರಂದು ರಾತ್ರಿ 11 ಗಂಟೆಗೆ ಮೀನುಗಾರಿಕೆಗೆ ತೆರಳಿದ್ದರು.
ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ ಸುವರ್ಣ ತ್ರಿಭುಜ ಬೋಟ್ ಸಹಿತ ಏಳು ಮಂದಿ ಮೀನುಗಾರರ ಕಣ್ಮರೆಯಾಗಿ ಒಂದು ತಿಂಗಳು ಪೂರ್ಣಗೊಂಡಿದೆ. ಆದರೆ ಈವರೆಗೂ ಮೀನುಗಾರರಿಗೆ ಸಂಬಂಧಿಸಿ ಯಾವುದೇ ಸುಳಿವು ಪತ್ತೆಯಾಗಿಲ್ಲ.
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…
ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…
ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…
ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…
ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…