ಮಲ್ಪೆ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ 7 ಮಂದಿ ಮೀನುಗಾರರು ಸಹಿತ ಬೋಟ್ ನಾಪತ್ತೆಯಾಗಿ 19 ದಿನ ಕಳೆದರೂ ಅವರ ಪತ್ತೆಗೆ ಗಂಭೀರ ಕ್ರಮ ಕೈಗೊಳ್ಳದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಜ. 6ರಂದು ಕರಾವಳಿಯ ಮೂರು ಜಿಲ್ಲೆಗಳ ಮೀನುಗಾರರು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಲಿದ್ದಾರೆ.
ಮಲ್ಪೆ ಮೀನುಗಾರ ಸಂಘದ ನೇತೃತ್ವದಲ್ಲಿ ಮಲ್ಪೆ ಬಂದರಿನಲ್ಲಿ ಬುಧವಾರ ನಡೆದ ಕಾರವಾರದಿಂದ ಮಂಗಳೂರು ವರೆಗಿನ ಮೀನುಗಾರ ಸಂಘಟನೆಗಳ ಬೃಹತ್ ಸಮಾಲೋಚನ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ಪಾಲ್ ಸುವರ್ಣ ಮಾತನಾಡಿ, ಸರಕಾರ ಮೀನುಗಾರರ ಬದುಕಿನ ಜೊತೆಗೆ ಚೆಲ್ಲಾಟ ಆಡುತ್ತಿದೆ. ಡಿ. 13ರಂದು ಬೋಟ್ ನಾಪತ್ತೆಯಾಗಿದ್ದರೂ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಾಪತ್ತೆಯಾಗಿರುವ ಮೀನುಗಾರರ ಕುಟುಂಬಗಳಿಗೆ ಮೀನುಗಾರಿಕಾ ಸಚಿವರಾಗಲಿ, ಜಿಲ್ಲಾ ಉಸ್ತುವಾರಿ ಸಚಿವರಾಗಲಿ ಭೇಟಿ ನೀಡಿ ಕುಟುಂಬದವರಿಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಲ್ಪೆ ಮೀನುಗಾರರ ಸಂಘ ಅಧ್ಯಕ್ಷ ಸತೀಶ್ ಕುಂದರ್ ಮತ್ತು ಮಲ್ಪೆ ಡೀಪ್ ಸೀ ಟ್ರಾಲ್ ಬೋಟ್ ಅಸೋಸಿಯೇಶನಿನ ಅಧ್ಯಕ್ಷ ಕಿಶೋರ್ ಡಿ. ಸುವರ್ಣ ಮಾತನಾಡಿ, ಮೀನುಗಾರರು ನಾಪತ್ತೆಯಾಗಿ 19 ದಿನ ಕಳೆದಿವೆ. ಮೀನುಗಾರಿಕೆ ಸಚಿವ ರಾಗಲಿ, ಉಸ್ತುವಾರಿ ಸಚಿವರಾಗಲಿ ಸಭೆಕರೆದು ಚರ್ಚೆ ಕೂಡ ನಡೆಸಿಲ್ಲ. ಮೀನುಗಾರರೆಲ್ಲರೂ ಒಗ್ಗಟ್ಟಿನಿಂದ ಸರಕಾರಕ್ಕೆ ಬಿಸಿ ಮುಟ್ಟಿಸಬೇಕಾಗಿದೆ; ಇದಕ್ಕಾಗಿ ಜೈಲ್ ಭರೋಗೂ ಸಿದ್ಧರಾಗಿ ರಬೇಕು ಎಂದರು.
ಜ. 6ರಂದು ನಡೆಯುವ ಪ್ರತಿಭಟನೆಯಲ್ಲಿ ಮೂರು ಜಿಲ್ಲೆಗಳ ಮೀನುಗಾರರು ಭಾಗವಹಿಸಿ, ಮೀನುಗಾರರ ಶಕ್ತಿ ಏನೆಂಬುವುದನ್ನು ತೋರಿಸಬೇಕು. ಆ ಮೂಲಕ ಸರಕಾರಕ್ಕೆ ಎಚ್ಚರಿಕೆ ನೀಡುವ ಕೆಲಸ ಮಾಡಬೇಕು. ಅಲ್ಲದೆ, ಇನ್ಮುಂದೆ ಸರಕಾರ ಮೀನುಗಾರರ ಸುರಕ್ಷತೆಗೆ ಹೆಚ್ಚಿನ ಕ್ರಮಕೈಗೊಳ್ಳುವಂತೆ ಮಾಡಬೇಕಾಗಿದೆ ಎಂದರು..
ಜ. 6ರಂದು ಬೆಳಗ್ಗೆ 10ಕ್ಕೆ ಉಡುಪಿಯ ಕರಾವಳಿ ಬೈಪಾಸ್ನಲ್ಲಿ ನಡೆಯುವ ರಾ.ಹೆ. ತಡೆಯಲ್ಲಿ ಉಪ್ಪಳದಿಂದ ಕಾರವಾರದವರೆಗೆ ಮೂರು ಜಿಲ್ಲೆಯಿಂದ ಸುಮಾರು 30 ಸಾವಿರಕ್ಕೂ ಮಿಕ್ಕಿ ಮೀನುಗಾರರು ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮುನ್ನ ಬೆಳಗ್ಗೆ 8.30ಕ್ಕೆ ಮಲ್ಪೆ ಮೀನುಗಾರಿಕೆ ಬಂದರಿನಿಂದ ಬೈಪಾಸ್ವರೆಗೆ ಪಾದಯಾತ್ರೆ ನಡೆಯಲಿದೆ.
ಸತೀಶ್ ಕುಂದರ್, ಅಧ್ಯಕ್ಷರು, ಮಲ್ಪೆ ಮೀನುಗಾರರ ಸಂಘ
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…