Featured

ಮಲ್ಪೆ ಬೋಟ್ ಪ್ರಕರಣ ; ಸ್ಪಂದಿಸದ ಕೇಂದ್ರ ಹಾಗೂ ರಾಜ್ಯ ಸರಕಾರ , ಹೆದ್ದಾರಿ ತಡೆದು ಪ್ರತಿಭಟನೆಗೆ ನಿರ್ಧಾರಿಸಿದ ಮೀನುಗಾರರು..

ಮಲ್ಪೆ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ 7 ಮಂದಿ ಮೀನುಗಾರರು ಸಹಿತ ಬೋಟ್‌ ನಾಪತ್ತೆಯಾಗಿ 19 ದಿನ ಕಳೆದರೂ ಅವರ ಪತ್ತೆಗೆ ಗಂಭೀರ ಕ್ರಮ ಕೈಗೊಳ್ಳದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಜ. 6ರಂದು ಕರಾವಳಿಯ ಮೂರು ಜಿಲ್ಲೆಗಳ ಮೀನುಗಾರರು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಲಿದ್ದಾರೆ.

ಮಲ್ಪೆ ಮೀನುಗಾರ ಸಂಘದ ನೇತೃತ್ವದಲ್ಲಿ ಮಲ್ಪೆ ಬಂದರಿನಲ್ಲಿ ಬುಧವಾರ ನಡೆದ ಕಾರವಾರದಿಂದ ಮಂಗಳೂರು ವರೆಗಿನ ಮೀನುಗಾರ ಸಂಘಟನೆಗಳ ಬೃಹತ್‌ ಸಮಾಲೋಚನ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ ಮಾತನಾಡಿ, ಸರಕಾರ ಮೀನುಗಾರರ ಬದುಕಿನ ಜೊತೆಗೆ ಚೆಲ್ಲಾಟ ಆಡುತ್ತಿದೆ. ಡಿ. 13ರಂದು ಬೋಟ್ ನಾಪತ್ತೆಯಾಗಿದ್ದರೂ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಾಪತ್ತೆಯಾಗಿರುವ ಮೀನುಗಾರರ ಕುಟುಂಬಗಳಿಗೆ ಮೀನುಗಾರಿಕಾ ಸಚಿವರಾಗಲಿ, ಜಿಲ್ಲಾ ಉಸ್ತುವಾರಿ ಸಚಿವರಾಗಲಿ ಭೇಟಿ ನೀಡಿ ಕುಟುಂಬದವರಿಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಲ್ಪೆ ಮೀನುಗಾರರ ಸಂಘ ಅಧ್ಯಕ್ಷ ಸತೀಶ್‌ ಕುಂದರ್‌ ಮತ್ತು ಮಲ್ಪೆ ಡೀಪ್‌ ಸೀ ಟ್ರಾಲ್‌ ಬೋಟ್‌ ಅಸೋಸಿಯೇಶನಿನ ಅಧ್ಯಕ್ಷ ಕಿಶೋರ್‌ ಡಿ. ಸುವರ್ಣ ಮಾತನಾಡಿ, ಮೀನುಗಾರರು ನಾಪತ್ತೆಯಾಗಿ 19 ದಿನ ಕಳೆದಿವೆ. ಮೀನುಗಾರಿಕೆ ಸಚಿವ ರಾಗಲಿ, ಉಸ್ತುವಾರಿ ಸಚಿವರಾಗಲಿ ಸಭೆಕರೆದು ಚರ್ಚೆ ಕೂಡ ನಡೆಸಿಲ್ಲ. ಮೀನುಗಾರರೆಲ್ಲರೂ ಒಗ್ಗಟ್ಟಿನಿಂದ ಸರಕಾರಕ್ಕೆ ಬಿಸಿ ಮುಟ್ಟಿಸಬೇಕಾಗಿದೆ; ಇದಕ್ಕಾಗಿ  ಜೈಲ್‌ ಭರೋಗೂ ಸಿದ್ಧರಾಗಿ ರಬೇಕು ಎಂದರು.

ಜ. 6ರಂದು ನಡೆಯುವ ಪ್ರತಿಭಟನೆಯಲ್ಲಿ ಮೂರು ಜಿಲ್ಲೆಗಳ ಮೀನುಗಾರರು ಭಾಗವಹಿಸಿ, ಮೀನುಗಾರರ ಶಕ್ತಿ ಏನೆಂಬುವುದನ್ನು ತೋರಿಸಬೇಕು. ಆ ಮೂಲಕ ಸರಕಾರಕ್ಕೆ ಎಚ್ಚರಿಕೆ ನೀಡುವ ಕೆಲಸ ಮಾಡಬೇಕು. ಅಲ್ಲದೆ, ಇನ್ಮುಂದೆ ಸರಕಾರ ಮೀನುಗಾರರ ಸುರಕ್ಷತೆಗೆ ಹೆಚ್ಚಿನ ಕ್ರಮಕೈಗೊಳ್ಳುವಂತೆ ಮಾಡಬೇಕಾಗಿದೆ ಎಂದರು..

ಜ. 6ರಂದು ಬೆಳಗ್ಗೆ 10ಕ್ಕೆ ಉಡುಪಿಯ ಕರಾವಳಿ ಬೈಪಾಸ್‌ನಲ್ಲಿ ನಡೆಯುವ ರಾ.ಹೆ. ತಡೆಯಲ್ಲಿ ಉಪ್ಪಳದಿಂದ ಕಾರವಾರದವರೆಗೆ ಮೂರು ಜಿಲ್ಲೆಯಿಂದ ಸುಮಾರು 30 ಸಾವಿರಕ್ಕೂ ಮಿಕ್ಕಿ ಮೀನುಗಾರರು ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮುನ್ನ ಬೆಳಗ್ಗೆ 8.30ಕ್ಕೆ ಮಲ್ಪೆ ಮೀನುಗಾರಿಕೆ ಬಂದರಿನಿಂದ ಬೈಪಾಸ್‌ವರೆಗೆ ಪಾದಯಾತ್ರೆ ನಡೆಯಲಿದೆ.
 ಸತೀಶ್‌ ಕುಂದರ್‌, ಅಧ್ಯಕ್ಷರು, ಮಲ್ಪೆ ಮೀನುಗಾರರ ಸಂಘ

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

20 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago