Categories: ಉಡುಪಿ

ಮಲ್ಪೆ : ಮಹಾಲಕ್ಷ್ಮೀ ಬ್ಯಾಂಕ್ ಸಾಲಕ್ಕಾಗಿ ನಕಲಿ ಸಹಿ ಬಳಕೆ ಪ್ರಕರಣ: ಎಫ್‌ಎಸ್‌ಎಲ್ ವರದಿ ತರಿಸಿ ಸೂಕ್ತ ತನಿಖೆಗೆ ಸಂತ್ರಸ್ತರ ಆಗ್ರಹ – vishwanews24

ಮಲ್ಪೆ : ಮಹಾಲಕ್ಷ್ಮೀ ಬ್ಯಾಂಕ್ ಸಾಲಕ್ಕಾಗಿ ನಕಲಿ ಸಹಿ ಬಳಕೆ ಪ್ರಕರಣ: ಎಫ್‌ಎಸ್‌ಎಲ್ ವರದಿ ತರಿಸಿ ಸೂಕ್ತ ತನಿಖೆಗೆ ಸಂತ್ರಸ್ತರ ಆಗ್ರಹ

ಉಡುಪಿ: ಶ್ರೀಮಹಾಲಕ್ಷ್ಮೀ ಬ್ಯಾಂಕ್ ಮಲ್ಪೆ ಶಾಖೆಯಲ್ಲಿ ನಕಲಿ ಸಹಿ ಬಳಸಿ ನೀಡಿರುವ ಸಾಲಕ್ಕೆ ಸಂಬಂಧಿಸಿ ವಿಧಿವಿಜ್ಞಾನ ಪ್ರಯೋಗಾಲಯ ದಿಂದ ಪರೀಕ್ಷಿಸಿ ಸೂಕ್ತ ತನಿಖೆ ನಡೆಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಉಡುಪಿ ತಾಲೂಕು ಸಂತ್ರಸ್ತರ ಸಮಿತಿಯ ನೇತೃತ್ವದಲ್ಲಿ ಸೋಮವಾರ ಉಡುಪಿ ಸಹಕಾರ ಇಲಾಖೆಯ ಉಪನಿಬಂಧಕಿ ಲಾವಣ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಶ್ರೀಮಹಾಲಕ್ಷ್ಮೀ ಬ್ಯಾಂಕ್ ಮಲ್ಪೆ ಶಾಖೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಕೋವಿಡ್ ಸಾಲಮೇಳ ಎಂಬ ಯೋಜನೆ ಅಡಿಯಲ್ಲಿ ಸಾರ್ವಜನಿಕರಿಗೆ ನಗದು ರೂಪದಲ್ಲಿ ಸಾಲಗಳನ್ನು ನೀಡಲಾಗಿದ್ದು, ಆ ಸಾಲವನ್ನು ಒಂದು ವರ್ಷದ ಬಳಿಕ ಮರು ಪಾವತಿಸಬೇಕಾಗಿತ್ತು. ಆದರೆ ಈ ಯೋಜನೆಯಲ್ಲಿ ಅಲ್ಪ ಪ್ರಮಾಣದ ಸಾಲವನ್ನು ಪಡೆದ ಸಾಲಗಾರರ ಸಾಲವನ್ನು 2ಲಕ್ಷ ರೂ. ಎಂದು ತಪ್ಪಾಗಿ ನಮೂದಿಸಿ ಈಗ ಅಸಲು ಮತ್ತು ಬಡ್ಡಿ ಸೇರಿಸಿ 3 ಲಕ್ಷಕ್ಕಿಂತ ಅಧಿಕ ಪಾವತಿಸುವಂತೆ ನೋಟಿಸು ನೀಡಲಾಗಿತ್ತು.

ಈ ಬಗ್ಗೆ ಬ್ಯಾಂಕಿನಲ್ಲಿ ವಿಚಾರಿಸಿ ಸಾಲ ಪತ್ರಗಳನ್ನು ಪರಿಶೀಲಿಸಿದಾಗ ಅದರಲ್ಲಿ ನಮ್ಮ ನಕಲಿ ಸಹಿ ಬಳಸಿ ಹೆಚ್ಚಿನ ಹಣ ನೀಡಿರುವುದನ್ನು ನಮೂದಿಸಿ ದುರುಪಯೋಗ ಮಾಡಿರುವುದು ಗಮನಕ್ಕೆ ಬಂತು. ಬಳಿಕ ಬ್ಯಾಂಕ್ ಸಾಲ ಪತ್ರದಲ್ಲಿನ ನಕಲಿ ಸಹಿಯಿಂದ ಅನ್ಯಾಯ ಕ್ಕೊಳಗಾದ ಸಂತ್ರಸ್ತರು ಒಟ್ಟಾಗಿ ಹೋರಾಟ ನಡೆಸಿ ನ್ಯಾಯ ಒದಗಿಸುವಂತೆ ಸರಕಾರದ ಗಮನಕ್ಕೆ ತಂದು ಒತ್ತಾಯ ಮಾಡಿದಾಗ ಸರಕಾರ ಈ ವಿಷಯದ ಬಗ್ಗೆ ನಿಯಮ 64ರ ಅಡಿಯಲ್ಲಿ ಸಹಕಾರ ಇಲಾಖೆ ಉಪನಿಬಂಧಕರು ಸೂಕ್ತ ತನಿಖೆಯನ್ನು ನಡೆಸುವಂತೆ ಆದೇಶ ಜಾರಿಗೊಳಿಸಿತು.

ಈ ತನಿಖೆಗೆ ಆದೇಶವಾಗಿ ಒಂದು ವರ್ಷ ಕಳೆದರೂ ಈವರೆಗೆ ನ್ಯಾಯ ಸಿಕ್ಕಿಲ್ಲ. ಹಾಗೆಯೇ ತನಿಖೆಗೆ ಆದೇಶವಾದ ದಿನದಿಂದಲೇ ನಮ್ಮ ಸಹಿಯ ನಕಲಿಯ ಬಗ್ಗೆ ಬ್ಯಾಂಕಿನಿಂದ ಸಾಲ ಪತ್ರವನ್ನು ತರಿಸಿ ನಮ್ಮ ಸಹಿಯ ಸತ್ಯಾಸತ್ಯತೆಯ ಬಗ್ಗೆ ವಿಧಿ ವಿಜ್ಞಾನ ಸಂಸ್ಥೆಯಿಂದ ತನಿಖೆ ನಡೆಸಬೇಕೆಂದು ತನಿಖಾಧಿಕಾರಿಯವರಿಗೆ ಮನವಿ ಸಲ್ಲಿಸಲಾಗಿದೆ.

ಆದರೆ ಇದನ್ನು ವಿಧಿವಿಜ್ಞಾನ ಸಂಸ್ಥೆಗೆ ಕಳುಹಿಸಿದ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ. ಅನ್ಯಾಯಕ್ಕೊಳಗಾದ ನಮ್ಮ ಅಭಿಪ್ರಾಯವನ್ನು ಕೇಳದೆ ಒಂದೇ ನೋಟಿಸಿನಲ್ಲಿ ಸಾಲ ಮರುಪಾವತಿಸುವ ಬಗ್ಗೆ ಸಹಕಾರಿ ಸಂಘಗಳ ನ್ಯಾಯಾಲಯ ಬೆಂಗಳೂರು ಏಕಪಕ್ಷೀಯ ತೀರ್ಪು ಕೈಗೊಂಡು ಆದೇಶಿಸಿದೆ. ಈ ತನಿಖೆಯ ವರದಿ ಬಾಕಿಯಿದ್ದರೂ ಬ್ಯಾಂಕಿನವರು ವಸೂಲಾತಿಗೆ ಮನೆ ಜಪ್ತಿ, ಆಸ್ತಿ ಜಪ್ತಿ ಹಾಗೂ ಚೆಕ್ ಹಾಕುವುದಾಗಿ ಸಂತ್ರಸ್ತರನ್ನು ಕಾನೂನಿನ ನೆಪದ ಮೂಲಕ ಬೆದರಿಸುತ್ತಿದ್ದಾರೆ.

ಆದ್ದರಿಂದ ಬ್ಯಾಂಕಿನ ಮಲ್ಪೆ ಶಾಖೆಯಲ್ಲಿ ನಮ್ಮ ಸಹಿಯನ್ನು ನಕಲಿ ಮಾಡಿ ಸಾಲ ನೀಡಿರುವ ಆ ಸಹಿಯ ಸತ್ಯಾಸತ್ಯತೆಯನ್ನು ತಿಳಿಯಲು ವಿಧಿವಿಜ್ಞಾನ ಪ್ರಯೋಗಾಲಯದಿಂದ ಪರೀಕ್ಷಿಸಿ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಬೇಕು. ಈ ತನಿಖೆ ಪೂರ್ಣಗೊಂಡು ವರದಿ ಬರುವವರೆಗೆ ನಮಗೆ ಸಾಲ ಮರುಪಾವತಿಗೆ ಕಿರುಕುಳ ನೀಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

16 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

16 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago