Featured

ಮಲ್ಪೆ : ಮಹಿಳೆಗೆ ಹಲ್ಲೆ ಘಟನೆ ದುರದೃಷ್ಟಕರ: ಶಾಸಕ ಯಶ್‌ಪಾಲ್ ಸುವರ್ಣ – vishwanews24

ಮಲ್ಪೆ : ಮಹಿಳೆಗೆ ಹಲ್ಲೆ ಘಟನೆ ದುರದೃಷ್ಟಕರ: ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ತೀರ ದುರದೃಷ್ಟಕರವಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸದಂತೆ ಮೀನುಗಾರಿಕೆ ಹಾಗೂ ಪೊಲೀಸ್ ಇಲಾಖೆ ಅಗತ್ಯ ಕ್ರಮ ವಹಿಸಬೇಕಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮೀನುಗಾರಿಕೆ ಇಲಾಖೆಯ ನಿರ್ಲಕ್ಷ್ಯ : ದೇಶದ ಅತೀ ದೊಡ್ಡ ಸರ್ವಋತು ಮೀನುಗಾರಿಕೆ ಮಲ್ಪೆ ಬಂದರಿನ ನಿರ್ವಹಣೆಯ ಬಗ್ಗೆ ಇಲಾಖೆಯ ದಿವ್ಯ ನಿರ್ಲಕ್ಷ್ಯ ಇಂತಹ ಘಟನೆಗೆ ಅವಕಾಶ ನೀಡಿದೆ. ಬಂದರಿನಲ್ಲಿ ನಿರಂತರವಾಗಿ ಕಳ್ಳತನ ಘಟನೆಗಳು ವರದಿಯಾಗುತ್ತಿದ್ದರೂ ಸೂಕ್ತ ಸಿಸಿಟಿವಿ ಅಳವಡಿಕೆ, ಹಾಗೂ ಭದ್ರತಾ ಸಿಬ್ಬಂದಿಗಳನ್ನು ನೇಮಿಸಿಲ್ಲ. ಈ ಬಗ್ಗೆ ಮೀನುಗಾರಿಕೆ ಮತ್ತು ಬಂದರು ಇಲಾಖೆ ಹಾಗೂ ಕರಾವಳಿ ಕಾವಲು ಪೊಲೀಸ್ ಅಧಿಕಾರಿಗಳೊಂದಿಗೆ 3 ಬಾರಿ ಸಭೆ ನಡೆಸಿ ಸೂಚನೆ ನೀಡಿದ್ದು, ಬಂದರು ನಿರ್ವಹಣೆಯ ಗುತ್ತಿಗೆ ಅವಧಿ ಮುಗಿದು ಒಂದು ವರ್ಷ ಮೀರಿದ್ದರೂ ಟೆಂಡರ್ ನಿಯಮಗಳನ್ನು ಪಾಲಿಸದೆ ನಿರ್ವಹಣೆಯಲ್ಲಿ ಲೋಪ ಎಸಗಿದ ಬಗ್ಗೆ ದೂರುಗಳಿದ್ದರೂ ಅದೇ ವ್ಯಕ್ತಿಗೆ ನಿಯಮ ಬಾಹಿರವಾಗಿ ಟೆಂಡರ್ ಮುಂದುವರೆಸಿದ್ದಾರೆ.

ಈವರೆಗೂ ಹೊಸ ಟೆಂಡರ್ ಕರೆಯದೇ ಇರುವ ಬಗ್ಗೆ ಕಳೆದ ಶನಿವಾರ ಕೂಡ ಸಭೆ ನಡೆಸಿ ಸೂಚನೆ ನೀಡಲಾಗಿತ್ತು. ಈ ಬಗ್ಗೆ ಜಿಲ್ಲಾಡಳಿತಕ್ಕೂ ಮಾಹಿತಿ ನೀಡಿದ್ದರೂ ಕ್ರಮ ಕೈಗೊಳ್ಳದೇ ಮೀನುಗಾರರು ಸಮಸ್ಯೆ ಎದುರಿಸುವಂತಾಗಿದೆ. ಜಿಲ್ಲಾಡಳಿತ ತಕ್ಷಣ ಈ ಗಂಭೀರ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

ಸಾವಿರಾರು ಮಂದಿಗೆ ಅನ್ನದ ಬಟ್ಟಲಾಗಿರುವ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಎಲ್ಲರೂ ಸೌಹಾರ್ದ ರೀತಿಯಲ್ಲಿ ಮೀನುಗಾರಿಕೆ ಚಟುವಟಿಕೆಯಲ್ಲಿ ಹಲವು ದಶಕಗಳಿಂದ ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ಹಲವು ಬಾರಿ ಸಣ್ಣ ಪುಟ್ಟ ಘಟನೆಗಳು ನಡೆದಾಗ ಮಲ್ಪೆ ಮೀನುಗಾರ ಸಂಘದ ನೇತೃತ್ವದಲ್ಲಿ ಸೌಹಾರ್ದ ರೀತಿಯಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆದಿದೆ. ಬಡವ ಶ್ರೀಮಂತ ಭೇದವಿಲ್ಲದೆ ಉಡುಪಿ ಮಾತ್ರವಲ್ಲದೇ ಹೊರ ರಾಜ್ಯ, ಹೊರ ಜಿಲ್ಲೆಯ ಸಾವಿರಾರು ಮಂದಿ ಮಲ್ಪೆ ಬಂದರಿನಲ್ಲಿ ದುಡಿಯುತ್ತಿದ್ದು ಈವರೆಗೂ ಎಂದಿಗೂ ಮೇಲು ಕೀಳೆಂಬ ತಾರತಮ್ಯಕ್ಕೆ ಮಲ್ಪೆ ಬಂದರಿನಲ್ಲಿ ಎಂದಿಗೂ ಅವಕಾಶ ನೀಡಿಲ್ಲ. ಕಾರ್ಮಿಕರ ಬಗ್ಗೆ ಮಲ್ಪೆ ಮೀನುಗಾರರ ಸಂಘ ವಿಶೇಷ ಕಾಳಜಿ ವಹಿಸುತ್ತಿದ್ದು ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಹೊರ ಜಿಲ್ಲೆಯ ಕಾರ್ಮಿಕರಿಗೆ ಬಂದರಿನಲ್ಲಿ ಊಟ ಹಾಗೂ ತಮ್ಮ ಊರುಗಳಿಗೆ ತೆರಳಲು ಬಸ್ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದಿರುವ ಉದಾಹರಣೆ ಇದೆ.

ಇತ್ತೀಚಿನ ದಿನಗಳಲ್ಲಿ ತೀವ್ರ ಮತ್ಸ್ಯಕ್ಷಾಮದಿಂದ ಮೀನುಗಾರರು ಆರ್ಥಿಕ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಇಂತಹ ಆಕಸ್ಮಿಕ ಘಟನೆ ನಡೆದಿದ್ದು, ಈಗಾಗಲೇ ಪೊಲೀಸ್ ಇಲಾಖೆ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದೆ. ಅಧಿವೇಶನದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿರುವ ಕಾರಣ ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರೊಂದಿಗೆ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಜಿಲ್ಲಾಡಳಿತ, ಮಲ್ಪೆ ಮೀನುಗಾರ ಸಂಘದ ಜೊತೆಯಾಗಿ ಸೂಕ್ತ ಕ್ರಮವಹಿಸುವುದಾಗಿ ಶಾಸಕ ಯಶ್‌ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

7 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

7 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

7 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

8 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago