Featured

ಮಲ್ಪೆ ಮಹಿಳೆ ಮೇಲೆ ಹಲ್ಲೆ ಪ್ರಕರಣ : ಮೀನುಗಾರರಿಗೆ ರಕ್ಷಣೆ ನೀಡುವಂತೆ ರಘುಪತಿ ಭಟ್ ಒತ್ತಾಯ – vishwanews24

ಮಲ್ಪೆ ಮಹಿಳೆ ಮೇಲೆ ಹಲ್ಲೆ ಪ್ರಕರಣ : ಮೀನುಗಾರರಿಗೆ ರಕ್ಷಣೆ ನೀಡುವಂತೆ ರಘುಪತಿ ಭಟ್ ಒತ್ತಾಯ

ಪೊಲೀಸ್ ಇಲಾಖೆ ಅಮಾಯಕ ಮೀನುಗಾರರ ಮೇಲೆ  ಕೇಸ್ ದಾಖಲಿಸಿ ಬಂಧಿಸಿರುವುದು ಸರಿಯಲ್ಲ

ಉಡುಪಿ : ಮಲ್ಪೆ ಬಂದರು ಪ್ರದೇಶದಲ್ಲಿ ಮಾ.18ರಂದು ನಡೆದ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಹಲ್ಲೆಯ ಘಟನೆಗೆ ಸಂಬಂಧಿಸಿದಂತೆ ಅಮಾಯಕರ ಮೇಲೆ ಅಟ್ರಾಸಿಟಿ ಮೊಕದ್ದಮೆ ದಾಖಲಿಸಿ ಬಂಧಿಸಿರುವುದು ಖಂಡನೀಯ. ಮಲ್ಪೆಯ ಘಟನೆ ಉದ್ದೇಶಪೂರ್ವಕಲ್ಲ. ಬೆಳಗ್ಗಿನ ಜಾವ 3 ಗಂಟೆಗೆ ಎದ್ದು ಮೀನುಗಾರರು ಸಮುದ್ರದಲ್ಲಿ ಜೀವದ ಹಂಗು ತೊರೆದು ಮೀನುಗಾರಿಕೆ ನಡೆಸಿ ತಂದ ಮೀನು ಕಳ್ಳತನವಾದಾಗ ಈ ತರದ ಆಕ್ರೋಶದ ಪ್ರತಿಕ್ರಿಯೆಗಳು ಸಾಮಾನ್ಯ. ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಅಮಾಯಕರ ಮೇಲೆ ಮೊಕದ್ದಮೆ ದಾಖಲಿಸದೆ ಮಲ್ಪೆ ಮೀನುಗಾರರ ಸಂಘವನ್ನು ಮಧ್ಯಸ್ಥಿಕೆ ಮಾಡಿ ಎರಡೂ ಕಡೆಯವರನ್ನು ಕರೆಸಿ ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸಿ ಮೀನುಗಾರರಿಗೆ ರಕ್ಷಣೆ ನೀಡಬೇಕು ಎಂದು ಉಡುಪಿಯ ನಿಕಟ ಪೂರ್ವ ಶಾಸಕರಾದ ಕೆ. ರಘುಪತಿ ಭಟ್ ಅವರು ಒತ್ತಾಯಿಸಿದ್ದಾರೆ.

ಈ ಪ್ರಕರಣದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹೊಡೆದಿರುವುದು ತಪ್ಪು. ಅದನ್ನು ನಾನು ಖಂಡಿಸುತ್ತೇನೆ. ಆದರೆ ಇದನ್ನು ವೈಭವೀಕರಿಸುವುದು ಸರಿಯಲ್ಲ. ಮಲ್ಪೆ ಬಂದರಿನಲ್ಲಿ ನಿರಂತರವಾಗಿ ಮೀನು ಕಳ್ಳತನ ನಡೆಯುತ್ತಿದ್ದರಿಂದ ಕಳ್ಳ ಕೈಗೆ ಸಿಕ್ಕಾಗ ಸಾರ್ವಜನಿಕರು ಆಕ್ರೋಶ ಭರಿತರಾಗಿ ಈ ರೀತಿ ಪ್ರತಿಕ್ರಿಯಿಸಿರಬಹುದು. ಯಾವುದೇ ಊರಿನಲ್ಲಿಯೂ ಕಳ್ಳರು ಕೈಗೆ ಸಿಕ್ಕಾಗ ಯಾರೂ ಗೌರವದಿಂದ ಕಾಣುವುದಿಲ್ಲ. ಈ ಪ್ರಕರಣ ನಡೆದ ಬಳಿಕ ಎರಡೂ ಕಡೆಯವರನ್ನು ಠಾಣೆಗೆ ಕರೆಸಿ ಮೀನುಗಾರ ಮುಖಂಡರ ಸಮಕ್ಷಮದಲ್ಲಿ ರಾಜಿ ಮಾಡಲಾಗಿತ್ತು. ಇಲ್ಲಿ ಎರಡು ಪಾರ್ಟಿಯವರೂ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರು. ಹಾಗೂ ಠಾಣಾಧಿಕಾರಿಗಳು ಎರಡೂ ಕಡೆಯವರಿಂದ ತಪ್ಪೊಪ್ಪಿಗೆ ಹಿಂಬರಹ ಬರೆಸಿಕೊಂಡು ಸೌಹಾರ್ದಯುತವಾಗಿ ಪ್ರಕರಣ ಇತ್ಯರ್ಥಗೊಳಿಸಿದ್ದರು.

ಆದರೆ ಈ ಘಟನೆಯ ವಿಡಿಯೋ ಚಿತ್ರೀಕರಣವನ್ನು ವೈಭವೀಕರಿಸಿದ ನಂತರ ಪೊಲೀಸ್ ಇಲಾಖೆ ಅಮಾಯಕ ಮೀನುಗಾರರ ಮೇಲೆ ಅಟ್ರಾಸಿಟಿ ಕೇಸ್ ದಾಖಲಿಸಿ ಬಂಧಿಸಿರುವುದು ಸರಿಯಲ್ಲ. ಪ್ರಕರಣದಲ್ಲಿ ಭಾಗಿಯಾಗದವರನ್ನು ಬಂಧಿಸಿರುವುದರಿಂದ ಮೀನುಗಾರರು ಅಭದ್ರತೆಗೆ ಒಳಗಾಗಿದ್ದಾರೆ. ಈ ಘಟನೆ ಉದ್ದೇಶಪೂರ್ವಕವಾಗಿರದೆ ಕ್ಷಣಿಕ ಸಿಟ್ಟಿನಿಂದ ನಡೆದ ಘಟನೆಯಾಗಿದೆ. ಕಳೆದ ಅನೇಕ ವರ್ಷಗಳಿಂದ ಮತ್ಸ್ಯಕ್ಷಾಮದಿಂದ ಮೀನುಗಾರಿಕೆ ಕುಂಠಿತಗೊಂಡು ಮೀನುಗಾರರು ನಷ್ಟ ಅನುಭವಿಸುತ್ತಿದ್ದಾರೆ. ಇದರ ನಡುವೆ ಮಲ್ಪೆ ಬಂದರಿನಲ್ಲಿ ನಿರಂತರವಾಗಿ ಮೀನು ಕಳ್ಳತನ ಹಾಗೂ ಮೀನುಗಾರಿಕಾ ಸಲಕರಣೆಗಳಾದ ಬೋಟಿನ ಪ್ಯಾನ್, ಬ್ಯಾಟರಿ, ಜಿಪಿಎಸ್, ವೈಯರ್ಲೆಸ್, ಫಿಶ್ ಪೈಂಡರ್, ಬಲೆ ಸಾಮಗ್ರಿಗಳು ಕಳ್ಳತನವಾಗುತ್ತಿದ್ದರಿಂದ ಇಲ್ಲಿನ ಜನ ಆಕ್ರೋಶ ಭರಿತರಾಗಿದ್ದರು. ಮಲ್ಪೆ ಬಂದರಿನಲ್ಲಿ ನಡೆಯುತ್ತಿರುವ ಕಳ್ಳತನಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಹಾಗೂ ಮೀನುಗಾರಿಕಾ ಇಲಾಖೆ ಕಠಿಣವಾದ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಈ ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸಿ ಮೀನುಗಾರರಿಗೆ ರಕ್ಷಣೆ ನೀಡಬೇಕು ಎಂದು ಸರಕಾರವನ್ನು ಹಾಗೂ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯವರನ್ನು ಒತ್ತಾಯಿಸಿದ್ದಾರೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

8 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

8 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

8 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

11 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

12 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

12 hours ago