Featured

ಮಲ್ಪೆ ಮಹಿಳೆ ಮೇಲೆ ಹಲ್ಲೆ ಪ್ರಕರಣ : ಮೀನುಗಾರರಿಗೆ ರಕ್ಷಣೆ ನೀಡುವಂತೆ ರಘುಪತಿ ಭಟ್ ಒತ್ತಾಯ – vishwanews24

ಮಲ್ಪೆ ಮಹಿಳೆ ಮೇಲೆ ಹಲ್ಲೆ ಪ್ರಕರಣ : ಮೀನುಗಾರರಿಗೆ ರಕ್ಷಣೆ ನೀಡುವಂತೆ ರಘುಪತಿ ಭಟ್ ಒತ್ತಾಯ

ಪೊಲೀಸ್ ಇಲಾಖೆ ಅಮಾಯಕ ಮೀನುಗಾರರ ಮೇಲೆ  ಕೇಸ್ ದಾಖಲಿಸಿ ಬಂಧಿಸಿರುವುದು ಸರಿಯಲ್ಲ

ಉಡುಪಿ : ಮಲ್ಪೆ ಬಂದರು ಪ್ರದೇಶದಲ್ಲಿ ಮಾ.18ರಂದು ನಡೆದ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಹಲ್ಲೆಯ ಘಟನೆಗೆ ಸಂಬಂಧಿಸಿದಂತೆ ಅಮಾಯಕರ ಮೇಲೆ ಅಟ್ರಾಸಿಟಿ ಮೊಕದ್ದಮೆ ದಾಖಲಿಸಿ ಬಂಧಿಸಿರುವುದು ಖಂಡನೀಯ. ಮಲ್ಪೆಯ ಘಟನೆ ಉದ್ದೇಶಪೂರ್ವಕಲ್ಲ. ಬೆಳಗ್ಗಿನ ಜಾವ 3 ಗಂಟೆಗೆ ಎದ್ದು ಮೀನುಗಾರರು ಸಮುದ್ರದಲ್ಲಿ ಜೀವದ ಹಂಗು ತೊರೆದು ಮೀನುಗಾರಿಕೆ ನಡೆಸಿ ತಂದ ಮೀನು ಕಳ್ಳತನವಾದಾಗ ಈ ತರದ ಆಕ್ರೋಶದ ಪ್ರತಿಕ್ರಿಯೆಗಳು ಸಾಮಾನ್ಯ. ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಅಮಾಯಕರ ಮೇಲೆ ಮೊಕದ್ದಮೆ ದಾಖಲಿಸದೆ ಮಲ್ಪೆ ಮೀನುಗಾರರ ಸಂಘವನ್ನು ಮಧ್ಯಸ್ಥಿಕೆ ಮಾಡಿ ಎರಡೂ ಕಡೆಯವರನ್ನು ಕರೆಸಿ ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸಿ ಮೀನುಗಾರರಿಗೆ ರಕ್ಷಣೆ ನೀಡಬೇಕು ಎಂದು ಉಡುಪಿಯ ನಿಕಟ ಪೂರ್ವ ಶಾಸಕರಾದ ಕೆ. ರಘುಪತಿ ಭಟ್ ಅವರು ಒತ್ತಾಯಿಸಿದ್ದಾರೆ.

ಈ ಪ್ರಕರಣದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹೊಡೆದಿರುವುದು ತಪ್ಪು. ಅದನ್ನು ನಾನು ಖಂಡಿಸುತ್ತೇನೆ. ಆದರೆ ಇದನ್ನು ವೈಭವೀಕರಿಸುವುದು ಸರಿಯಲ್ಲ. ಮಲ್ಪೆ ಬಂದರಿನಲ್ಲಿ ನಿರಂತರವಾಗಿ ಮೀನು ಕಳ್ಳತನ ನಡೆಯುತ್ತಿದ್ದರಿಂದ ಕಳ್ಳ ಕೈಗೆ ಸಿಕ್ಕಾಗ ಸಾರ್ವಜನಿಕರು ಆಕ್ರೋಶ ಭರಿತರಾಗಿ ಈ ರೀತಿ ಪ್ರತಿಕ್ರಿಯಿಸಿರಬಹುದು. ಯಾವುದೇ ಊರಿನಲ್ಲಿಯೂ ಕಳ್ಳರು ಕೈಗೆ ಸಿಕ್ಕಾಗ ಯಾರೂ ಗೌರವದಿಂದ ಕಾಣುವುದಿಲ್ಲ. ಈ ಪ್ರಕರಣ ನಡೆದ ಬಳಿಕ ಎರಡೂ ಕಡೆಯವರನ್ನು ಠಾಣೆಗೆ ಕರೆಸಿ ಮೀನುಗಾರ ಮುಖಂಡರ ಸಮಕ್ಷಮದಲ್ಲಿ ರಾಜಿ ಮಾಡಲಾಗಿತ್ತು. ಇಲ್ಲಿ ಎರಡು ಪಾರ್ಟಿಯವರೂ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರು. ಹಾಗೂ ಠಾಣಾಧಿಕಾರಿಗಳು ಎರಡೂ ಕಡೆಯವರಿಂದ ತಪ್ಪೊಪ್ಪಿಗೆ ಹಿಂಬರಹ ಬರೆಸಿಕೊಂಡು ಸೌಹಾರ್ದಯುತವಾಗಿ ಪ್ರಕರಣ ಇತ್ಯರ್ಥಗೊಳಿಸಿದ್ದರು.

ಆದರೆ ಈ ಘಟನೆಯ ವಿಡಿಯೋ ಚಿತ್ರೀಕರಣವನ್ನು ವೈಭವೀಕರಿಸಿದ ನಂತರ ಪೊಲೀಸ್ ಇಲಾಖೆ ಅಮಾಯಕ ಮೀನುಗಾರರ ಮೇಲೆ ಅಟ್ರಾಸಿಟಿ ಕೇಸ್ ದಾಖಲಿಸಿ ಬಂಧಿಸಿರುವುದು ಸರಿಯಲ್ಲ. ಪ್ರಕರಣದಲ್ಲಿ ಭಾಗಿಯಾಗದವರನ್ನು ಬಂಧಿಸಿರುವುದರಿಂದ ಮೀನುಗಾರರು ಅಭದ್ರತೆಗೆ ಒಳಗಾಗಿದ್ದಾರೆ. ಈ ಘಟನೆ ಉದ್ದೇಶಪೂರ್ವಕವಾಗಿರದೆ ಕ್ಷಣಿಕ ಸಿಟ್ಟಿನಿಂದ ನಡೆದ ಘಟನೆಯಾಗಿದೆ. ಕಳೆದ ಅನೇಕ ವರ್ಷಗಳಿಂದ ಮತ್ಸ್ಯಕ್ಷಾಮದಿಂದ ಮೀನುಗಾರಿಕೆ ಕುಂಠಿತಗೊಂಡು ಮೀನುಗಾರರು ನಷ್ಟ ಅನುಭವಿಸುತ್ತಿದ್ದಾರೆ. ಇದರ ನಡುವೆ ಮಲ್ಪೆ ಬಂದರಿನಲ್ಲಿ ನಿರಂತರವಾಗಿ ಮೀನು ಕಳ್ಳತನ ಹಾಗೂ ಮೀನುಗಾರಿಕಾ ಸಲಕರಣೆಗಳಾದ ಬೋಟಿನ ಪ್ಯಾನ್, ಬ್ಯಾಟರಿ, ಜಿಪಿಎಸ್, ವೈಯರ್ಲೆಸ್, ಫಿಶ್ ಪೈಂಡರ್, ಬಲೆ ಸಾಮಗ್ರಿಗಳು ಕಳ್ಳತನವಾಗುತ್ತಿದ್ದರಿಂದ ಇಲ್ಲಿನ ಜನ ಆಕ್ರೋಶ ಭರಿತರಾಗಿದ್ದರು. ಮಲ್ಪೆ ಬಂದರಿನಲ್ಲಿ ನಡೆಯುತ್ತಿರುವ ಕಳ್ಳತನಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಹಾಗೂ ಮೀನುಗಾರಿಕಾ ಇಲಾಖೆ ಕಠಿಣವಾದ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಈ ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸಿ ಮೀನುಗಾರರಿಗೆ ರಕ್ಷಣೆ ನೀಡಬೇಕು ಎಂದು ಸರಕಾರವನ್ನು ಹಾಗೂ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯವರನ್ನು ಒತ್ತಾಯಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago