ಮಲ್ಪೆ: ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಹಾಗೂ ಮೀನುಗಾರಿಕೆಗೆ ಉತ್ತೇಜನ ನೀಡಲು ಪೂರಕವಾಗಿ ಮೀನುಗಾರರ ಬೇಡಿಕೆಯ ಈಡೇರಿಕೆ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಬಂದರು ಅಭಿವೃದ್ಧಿ ಮತ್ತು ಮೀನು ಗಾರರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ಈಡೇರಿಸುವಂತೆ ವಿಧಾನ ಪರಿಷತ್ ಸದಸ್ಯ ಐವನ್ ಡಿ’ ಸೋಜಾ ಮತ್ತು ಕಾಂಗ್ರೆಸ್ ನಾಯಕ ಪ್ರಸಾದ್ರಾಜ್ ಕಾಂಚನ್ ನೇತೃತ್ವದಲ್ಲಿ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿಯು ಬುಧವಾರ ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಬಜೆಟ್ ಪೂರ್ವವಾಗಿ ಭೇಟಿ ಮಾಡಿ ಮನವಿ ನೀಡಿದರು.
ವಿವಿಧ ಬೇಡಿಕೆಗಳು
ಯಾಂತ್ರಿಕ ಬೋಟಿನವರಿಗೆ ವಾರ್ಷಿಕ ಕೋಟದೊಂದಿಗೆ ದಿನವಹಿ 500 ಲೀ. ನಂತೆ ಡೀಸೆಲ್, ಮಹಿಳಾ ಮೀನುಗಾರರಿಗೆ ಬಡ್ಡಿ ರಹಿತ
ಸಾಲ, ಮೊದಲಾದ ಬೇಡಿಕೆಗಳನ್ನು ಸಿಎಂ ಮುಂದಿರಿಸಲಾಯಿತು.
ಕ್ರಿಯಾ ಸಮಿತಿ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಉಪಾಧ್ಯಕ್ಷ ಮೋಹನ್ ಬೆಂಗ್ರೆ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ್ ಕೆ. ಸುವರ್ಣ, ಮಂಗಳೂರು ಟ್ರಾಲ್ ಬೋಟು ಮೀನುಗಾರರ ಸಂಘದ ಅಧ್ಯಕ್ಷ ಚೇತನ್, ಪ್ರಮುಖರಾದ ಮನೋಹರ್ ಬೋಳೂರು, ಸೋಮನಾಥ್ ಕಾಂಚನ್, ಕಿಶೋರ್ ಪಡುಕರೆ, ವಿನಯ್ ಕರ್ಕೇರ, ರಾಜೇಶ್ ಪುತ್ರನ್, ಇಬ್ರಾಹಿಂ ಬೆಂಗ್ರೆ ಮೊದಲಾದವರಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…