ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಈ ಘಟನೆ ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಸ್ಥಳೀಯ ಉದ್ಯಮಿ ಹರೀಶ್ ಪೂಜಾರಿ ಅಲಿಯಾಸ್ “ಚೋಟು” ಎಂಬವರು ಮಹಿಳೆಯ ಮೇಲೆ ಕೈ ಹಾಕಿದ ಆರೋಪ ಕೇಳಿಬಂದಿದೆ. ಸಾರ್ವಜನಿಕರ ಮುಂದೆಯೇ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದ್ದು, ಸ್ಥಳದಲ್ಲಿದ್ದ ಜನರು ತಕ್ಷಣ ಪ್ರತಿಕ್ರಿಯಿಸಿ ಆರೋಪಿಯನ್ನು ಪ್ರಶ್ನಿಸಿದ್ದಾರೆ ಎಂದು ಹೇಳಲಾಗಿದೆ. ಹಲ್ಲೆಗೆ ಸೂಕ್ತ ಕಾರಣ ಮತ್ತು ಹೆ್ಚ್ಚಿನ ವಿವರ ಪೋಲಿಸ್ ತನಿಖೆಯಿಂದ ಹೊರಬೇಕಾಗಿದೆ.
ಇದನ್ನೂ ಓದಿ:
ಘಟನೆಯ ಕುರಿತಾದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಘಟನೆಯ ಬಗ್ಗೆ ಇನ್ನಷ್ಟು ವಿವರಗಳು ಲಭ್ಯವಾಗಬೇಕಿದ್ದು, ಸಂಬಂಧಿತ ಅಧಿಕಾರಿಗಳು ಪ್ರಕರಣದ ಕುರಿತು ತನಿಖೆ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಮತ್ತೊಮ್ಮೆ ಚರ್ಚೆ ಆರಂಭವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಇದನ್ನೂ ಓದಿ:
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…