ಉಡುಪಿ : ಮಲ್ಪೆಯ ಬಾಪುತೋಟ ಬಳಿಯ ಮೀನುಗಾರಿಕಾ ಬಂದರಿನ ಸೇತುವೆ ಪಕ್ಕದ ದಕ್ಕೆಯಲ್ಲಿ ನಿಲ್ಲಿಸಲಾಗಿದ್ದ ಮೀನುಗಾರಿಕಾ ಬೋಟಿನಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡು, ಬೋಟು ಸಂಪೂರ್ಣ ಸುಟ್ಟು ಹೋದ ಘಟನೆ ನಡೆದಿದೆ.
ಮಲ್ಪೆಯ ಜನಾರ್ದನ ಟಿ. ಕಾಂಚನ್ ಎಂಬವರಿಗೆ ಸೇರಿದ ‘ರವಿಪ್ರಕಾಶ್’ ಎಂಬ ಸಣ್ಣಟ್ರಾಲ್ (ಫಿಶಿಂಗ್) ಬೋಟಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯ ದೋಣಿಯವರು ಗಮನಿಸಿ ಸಕಾಲದಲ್ಲಿ ಮಾಹಿತಿ ನೀಡಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಆ ಬೋಟಿನ ಮೀನುಗಾರರು ಮೀನುಗಾರಿಕೆ ಮುಗಿಸಿಬಂದು ಬೋಟನ್ನು ಬಾಪುತೋಟದ ಬಳಿಯ ದಕ್ಕೆಯಲ್ಲಿ ನಿಲ್ಲಿಸಿದ್ದರು. ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಸಕಾಲದಲ್ಲಿ ಬೆಂಕಿ ನಂದಿಸಿದ್ದಾರೆ.
ಬೆಂಕಿ ಕಾಣಿಸಿಕೊಂಡ ಬೋಟಿನ ಸುತ್ತ ಸುಮಾರು 25ರಿಂದ 30 ಬೋಟುಗಳು ನಿಂತಿದ್ದರೂ, ಸಮುದ್ರದ ನೀರಿನ ಉಬ್ಬರ ಇತರ ಯಾವುದೇ ಬೋಟಿಗೆ ಬೆಂಕಿ ತಗಲದಿರಲು ಕಾರಣವಾಯಿತೆನ್ನಲಾಗಿದೆ. ಬೆಂಕಿಗಾಹುತಿಯಾದ ಬೋಟಿನಲ್ಲಿ ಬಲೆ, 200 ಲೀ. ಡಿಸೇಲ್, ಜಿಪಿಎಸ್, ಫಿಶ್ ಫೈಂಡರ್, ಲೈಫ್ ಜಾಕೆಟ್, ವಾಟರ್ ಟ್ಯಾಂಕರ್, ಬಾಕ್ಸ್ ಇದ್ದು, ಸುಮಾರು 15 ಲಕ್ಷ ರೂ.ಗಳಷ್ಟು ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…