ಮಲ್ಪೆ: ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಬೋಟೊಂದು ಮುಳುಗಡೆಗೊಂಡಿದ್ದು ,ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ಬೇರೆ ಬೋಟಿನವರು ರಕ್ಷಿಸಿದ್ದಾರೆ.
ಕಡೆಕಾರು ರಕ್ಷಾ ಅವರಿಗೆ ಬೋಟು ಮಲ್ಪೆ ಬಂದರಿನಿಂದ ತೆರಳಿತ್ತು. ಡಿಸೆಂಬರ್ 19ರಂದು ಬೆಳಗ್ಗೆ 6.30ರ ವೇಳೆಗೆ ಮೀನುಗಾರಿಕೆ ನಡೆಸುವಾಗ ನೀರಿನಡಿಯಲ್ಲಿದ್ದ ಯಾವುದೋ ವಸ್ತು ಬೋಟ್ನ ತಳ ಒಡೆದು ನೀರು ನುಗ್ಗಲಾರಂಭಿಸಿತು. ತತ್ ಕ್ಷಣ ಬೋಟಿನ ತಂಡೇಲ ವಯರ್ ಲೆಸ್ ಮೂಲಕ ಇತರ ಬೋಟ್ಗಳಿಗೆ ಸಂದೇಶ ನೀಡಿದರು.
ಶ್ರೀ ಮೂಕಾಂಬಿಕಾ ಅನುಗ್ರಹ ಬೋಟಿನವನರು ಧಾವಿಸಿ ಬಂದು ಮುಳುಗುತ್ತಿರುವ ಬೋಟನ್ನು ಮೇಲೆಳೆಯಲು ಯತ್ನಿಸಿದರು. ನೀರಿನ ಅಬ್ಬರ ಜಾಸ್ತಿಯಾಗಿದ್ದರಿಂದ ಪ್ರಯತ್ನ ಫಲ ನೀಡಲಿಲ್ಲ. ಸುಮಾರು 8 ಗಂಟೆ ವೇಳೆಗೆ ಬೋಟ್ ಪೂರ್ಣ ಮುಳುಗಡೆಗೊಂಡಿತು. ಅದರಲ್ಲಿದ್ದ ಮೀನುಗಾರರನ್ನು ಮೂಕಾಂಬಿಕಾ ಬೋಟಿನವರು ದಡಕ್ಕೆ ಸೇರಿಸಿದ್ದಾರೆ.ಘಟನೆಯಿಂದ ಸುಮಾರು 18 ಲ.ರೂ. ನಷ್ಟ ಅಂದಾಜಿಸಲಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…