ಮಲ್ಪೆ: ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಬೋಟೊಂದು ಮುಳುಗಡೆಗೊಂಡಿದ್ದು ,ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ಬೇರೆ ಬೋಟಿನವರು ರಕ್ಷಿಸಿದ್ದಾರೆ.
ಕಡೆಕಾರು ರಕ್ಷಾ ಅವರಿಗೆ ಬೋಟು ಮಲ್ಪೆ ಬಂದರಿನಿಂದ ತೆರಳಿತ್ತು. ಡಿಸೆಂಬರ್ 19ರಂದು ಬೆಳಗ್ಗೆ 6.30ರ ವೇಳೆಗೆ ಮೀನುಗಾರಿಕೆ ನಡೆಸುವಾಗ ನೀರಿನಡಿಯಲ್ಲಿದ್ದ ಯಾವುದೋ ವಸ್ತು ಬೋಟ್ನ ತಳ ಒಡೆದು ನೀರು ನುಗ್ಗಲಾರಂಭಿಸಿತು. ತತ್ ಕ್ಷಣ ಬೋಟಿನ ತಂಡೇಲ ವಯರ್ ಲೆಸ್ ಮೂಲಕ ಇತರ ಬೋಟ್ಗಳಿಗೆ ಸಂದೇಶ ನೀಡಿದರು.
ಶ್ರೀ ಮೂಕಾಂಬಿಕಾ ಅನುಗ್ರಹ ಬೋಟಿನವನರು ಧಾವಿಸಿ ಬಂದು ಮುಳುಗುತ್ತಿರುವ ಬೋಟನ್ನು ಮೇಲೆಳೆಯಲು ಯತ್ನಿಸಿದರು. ನೀರಿನ ಅಬ್ಬರ ಜಾಸ್ತಿಯಾಗಿದ್ದರಿಂದ ಪ್ರಯತ್ನ ಫಲ ನೀಡಲಿಲ್ಲ. ಸುಮಾರು 8 ಗಂಟೆ ವೇಳೆಗೆ ಬೋಟ್ ಪೂರ್ಣ ಮುಳುಗಡೆಗೊಂಡಿತು. ಅದರಲ್ಲಿದ್ದ ಮೀನುಗಾರರನ್ನು ಮೂಕಾಂಬಿಕಾ ಬೋಟಿನವರು ದಡಕ್ಕೆ ಸೇರಿಸಿದ್ದಾರೆ.ಘಟನೆಯಿಂದ ಸುಮಾರು 18 ಲ.ರೂ. ನಷ್ಟ ಅಂದಾಜಿಸಲಾಗಿದೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…