ಮಲ್ಪೆ: ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಬೋಟೊಂದು ಮುಳುಗಡೆಗೊಂಡಿದ್ದು ,ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ಬೇರೆ ಬೋಟಿನವರು ರಕ್ಷಿಸಿದ್ದಾರೆ.
ಕಡೆಕಾರು ರಕ್ಷಾ ಅವರಿಗೆ ಬೋಟು ಮಲ್ಪೆ ಬಂದರಿನಿಂದ ತೆರಳಿತ್ತು. ಡಿಸೆಂಬರ್ 19ರಂದು ಬೆಳಗ್ಗೆ 6.30ರ ವೇಳೆಗೆ ಮೀನುಗಾರಿಕೆ ನಡೆಸುವಾಗ ನೀರಿನಡಿಯಲ್ಲಿದ್ದ ಯಾವುದೋ ವಸ್ತು ಬೋಟ್ನ ತಳ ಒಡೆದು ನೀರು ನುಗ್ಗಲಾರಂಭಿಸಿತು. ತತ್ ಕ್ಷಣ ಬೋಟಿನ ತಂಡೇಲ ವಯರ್ ಲೆಸ್ ಮೂಲಕ ಇತರ ಬೋಟ್ಗಳಿಗೆ ಸಂದೇಶ ನೀಡಿದರು.
ಶ್ರೀ ಮೂಕಾಂಬಿಕಾ ಅನುಗ್ರಹ ಬೋಟಿನವನರು ಧಾವಿಸಿ ಬಂದು ಮುಳುಗುತ್ತಿರುವ ಬೋಟನ್ನು ಮೇಲೆಳೆಯಲು ಯತ್ನಿಸಿದರು. ನೀರಿನ ಅಬ್ಬರ ಜಾಸ್ತಿಯಾಗಿದ್ದರಿಂದ ಪ್ರಯತ್ನ ಫಲ ನೀಡಲಿಲ್ಲ. ಸುಮಾರು 8 ಗಂಟೆ ವೇಳೆಗೆ ಬೋಟ್ ಪೂರ್ಣ ಮುಳುಗಡೆಗೊಂಡಿತು. ಅದರಲ್ಲಿದ್ದ ಮೀನುಗಾರರನ್ನು ಮೂಕಾಂಬಿಕಾ ಬೋಟಿನವರು ದಡಕ್ಕೆ ಸೇರಿಸಿದ್ದಾರೆ.ಘಟನೆಯಿಂದ ಸುಮಾರು 18 ಲ.ರೂ. ನಷ್ಟ ಅಂದಾಜಿಸಲಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…